
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿರುವ ಕುರಿತು ಮಕ್ಕಳ ಸಹಾಯವಾಣಿ 1098ಕ್ಕೆ ಅಪರಿಚಿತ ವ್ಯಕ್ತಿಯಿಂದ ದೂರು ದಾಖಲಾಗಿತ್ತು. ದೂರು ಸ್ವೀಕರಿಸುತ್ತಿದ್ದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ದೌಡಾಯಿಸಿದರು.
ಮದುವೆಯ ಸಿರೆಪ್ಷನ್ ಕಾರ್ಯಕ್ರಮ ಮುಗಿದು ಬಳೆ ಶಾಸ್ತ್ರ ನಡೆಯುತ್ತಿದ್ದ ವೇಳೆ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಶಾಲಾ ದಾಖಲಾತಿಗಳ ಪ್ರಕಾರ ಬಾಲಕಿಗೆ ಕೇವಲ 16 ವರ್ಷ ವಯಸ್ಸು ಇರುವುದಾಗಿ ದೃಢಪಟ್ಟಿದೆ. ಬಳಿಕ ಮದುವೆ ಕಾರ್ಯವನ್ನು ತಡೆದು ಬಾಲಕಿಯನ್ನು ರಕ್ಷಿಸಲಾಯಿತು.
ರಕ್ಷಿಸಲಾದ ಬಾಲಕಿಯನ್ನು ಹೆಚ್ಚಿನ ಆರೈಕೆ ಹಾಗೂ ಕೌನ್ಸೆಲಿಂಗ್ಗಾಗಿ ದೊಡ್ಡಬಳ್ಳಾಪುರದ ಸಖಿ ಕೇಂದ್ರಕ್ಕೆ ಕಳುಹಿಸಲಾಗಿದೆ.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತಾಲಕ್ಷ್ಮಿ ಹಾಗೂ ಶ್ರಿಧರ್, ಶ್ರೀನಿವಾಸ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ…