ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ ಕಂಡುಬಂದಿತು. ಬೆಳ್ಳಂಬೆಳಗ್ಗೆ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಶನಿದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಅಮಾವಾಸ್ಯೆ ಮತ್ತು ಶನೇಶ್ವರ ಜಯಂತಿ ಸಂಯೋಗವನ್ನು ಅತ್ಯಂತ ಪುಣ್ಯಕರವೆಂದು ಪರಿಗಣಿಸಲಾಗುತ್ತದೆ. ಈ ಹಿನ್ನೆಲೆ ಭಕ್ತರು ಎಳ್ಳೆಣ್ಣೆ ದೀಪ ಹಚ್ಚಿ, ತೈಲಾಭಿಷೇಕ, ಅರ್ಚನೆ ಹಾಗೂ ವಿಶೇಷ ಹೋಮಗಳಲ್ಲಿ ಭಾಗವಹಿಸಿದರು. ದೇವಸ್ಥಾನದಲ್ಲಿ ವಿಶೇಷ ಅಲಂಕಾರ, ಭಜನೆ ಹಾಗೂ ಪ್ರಸಾದ ವಿತರಣೆಯ ವ್ಯವಸ್ಥೆ ಮಾಡಲಾಗಿತ್ತು.

ಭಕ್ತರ ಸಂಖ್ಯೆ ಹೆಚ್ಚಿದ್ದರಿಂದ ದೇವಸ್ಥಾನದ ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ ಹಾಗೂ ವಾಹನ ಸಂಚಾರ ನಿಯಂತ್ರಣ ವ್ಯವಸ್ಥೆ ಕಲ್ಪಿಸಲಾಗಿತ್ತು. ಜಿಲ್ಲೆಯ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ ಭಕ್ತಿಭಾವದಿಂದ ಪೂಜೆ ಸಲ್ಲಿಸಿದರು.

Leave a Reply

Your email address will not be published. Required fields are marked *

error: Content is protected !!