
ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡಿದ್ದಾರೆ. ಇವರ ಜೊತೆಗೆ ಡಾ.ಜಿ ಪರಮೇಶ್ವರ್ ಅವರು ಇದ್ದರು.
ಈ ಕುರಿತು ಸಿದ್ದರಾಮಯ್ಯನವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ “ಇಂದು ಸಂಜೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅವರು ಹಾಗೂ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಜಿ.ಪರಮೇಶ್ವರ್ ಅವರು ನನ್ನನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದರು.
ಈ ವೇಳೆ ಇಬ್ಬರೂ ನಾಯಕರಿಗೆ ಅಭಿನಂದಿಸಿ, ಶುಭ ಹಾರೈಸಿದೆ” ಎಂದು ಬರೆದುಕೊಂಡಿದ್ದಾರೆ.
ಅಂದಹಾಗೆ ಉಪಮುಖ್ಯಮಂತ್ರಿ ಸ್ಥಾನವನ್ನು ಜಿ.ಪರಮೇಶ್ವರ್ ಅವರಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ…