ದೊಡ್ಡಬಳ್ಳಾಪುರ ಯೋಗಾ ಪ್ರತಿಭೆ, ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪುರಸ್ಕೃತೆ ಜಾಹ್ನವಿ ಎಂ.ಆರ್ ಗೆ ಸನ್ಮಾನ

ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ ಯೋಗ ಚಾಂಪಿಯನ್ ಶಿಪ್ ನಲ್ಲಿ ದೊಡ್ಡಬಳ್ಳಾಪುರ ಯೋಗಾ ಪ್ರತಿಭೆ ಕುಮಾರಿ ಜಾಹ್ನವಿ ಎಂ.ಆರ್ ಅವರು ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪಡೆದಿರುತ್ತಾರೆ. ಈ ಹಿನ್ನೆಲೆ ಇಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಮತ್ತು ಚೇರ್ಮನ್ ಕೃಷ್ಣಮೂರ್ತಿ ಅವರು ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪುರಸ್ಕೃತೆ ಕುಮಾರಿ ಜಾಹ್ನವಿ ಎಂ. ಆರ್ ಅವರನ್ನು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಕೆ ಎಸ್ ಎ ವೈ ಎಸ್ ಎ ಕಾರ್ಯದರ್ಶಿ ನಟರಾಜ್, ಉಪಾಧ್ಯಕ್ಷ ಶ್ಯಾಮಸುಂದರ್, ಮತ್ತು ನಿಸರ್ಗ ಯೋಗ ಕೇಂದ್ರದ ತರಬೇತುದಾರರು, ವಿದ್ಯಾರ್ಥಿಗಳು ಇದ್ದರು.

Leave a Reply

Your email address will not be published. Required fields are marked *

error: Content is protected !!