ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರವನ್ನು ಸಮರ್ಥವಾಗಿ ಕಟ್ಟಿ ಹಾಕಲು, ಸರ್ಕಾರದ ಸಣ್ಣ ತಪ್ಪನ್ನು ವಿಮರ್ಶೆ ಮಾಡುವ ಸಲುವಾಗಿ ಅಳೆದು ತೂಗಿ ವಿಪಕ್ಷ ನಾಯಕ ಸ್ಥಾನಕ್ಕೆ ಬೊಮ್ಮಾಯಿಯವರ ಹೆಸರು ಫೈನಲ್ ಮಾಡಿರೋ ಹೈಕಮಾಂಡ್.
ಬಸವರಾಜ್ ಬೊಮ್ಮಾಯಿ ಅವರು ನಿಕಟ ಪೂರ್ವ ಮುಖ್ಯಮಂತ್ರಿಯಾಗಿದ್ದ ಕಾರಣ ಎಲ್ಲ ಇಲಾಖೆಗಳ ಆಗುಹೋಗುಗಳ ಬಗ್ಗೆ ಅರಿವು ಇದ್ದೇ ಇರುತ್ತದೆ. ಜೊತೆಗೆ ಸದನದ ಅನುಭವ, ಆಡಳಿತದ ಅನುಭವದ ಹಿನ್ನೆಲೆಯಲ್ಲಿ ಬೊಮ್ಮಾಯಿಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್.
ಜೊತೆಗೆ ಲಿಂಗಾಯಿತರನ್ನು ವಿಪಕ್ಷ ನಾಯಕ ಮಾಡಿದರೆ ಸಮುದಾಯಕ್ಕೆ ಒಳ್ಳೆಯ ಸಂದೇಶ ರವಾನೆ ಮಾಡಿದಂತೆ ಆಗುತ್ತದೆ ಎಂಬ ಉದ್ದೇಶದಿಂದ ವಿಪಕ್ಷ ಸ್ಥಾನಕ್ಕೆ ಬೊಮ್ಮಾಯಿ ಅವರನ್ನ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ವಿಪಕ್ಷ ನಾಯಕ ಸ್ಥಾನಕ್ಕೆ ಬಸನಗೌಡ ಪಾಟೀಲ್ ಯತ್ನಾಳ ಮತ್ತು ಮಾಜಿ ಸಚಿವ ಸುನಿಲ್ ಕುಮಾರ್ ಅವರು ತೀವ್ರ ಕಸರತ್ತು ನಡೆಸಿದ್ದರು. ಆದರೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮಣೆ ಹಾಕಿರುವ ಹೈಕಮಾಂಡ್.