ಲಕ್ಕೇನಹಳ್ಳಿ ಬಳಿ ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ವಿರೋಧ: ಜಲಸಂಪನ್ಮೂಲ ಸಚಿವರಿಗೆ ರೈತರ ಮನವಿ

ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಫಲವತ್ತಾದ ಕೃಷಿ ಭೂಮಿಯಲ್ಲಿ ಡ್ಯಾಂ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಒತ್ತಾಯಿಸಿದ ಶ್ರೀರಾಮನಹಳ್ಳಿ, ಸಿಂಗೇನಹಳ್ಳಿ, ಸಾಸಲು, ಲಕ್ಕೇನಹಳ್ಳಿ, ದಾಸರಪಾಳ್ಯ ಹಾಗೂ ಮಚ್ಚೇನಹಳ್ಳಿ ಗ್ರಾಮಗಳ ರೈತರು ಒಟ್ಟಾಗಿ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಸ್ವೀಕರಿಸಿದ ನಂತರ ಜು.23ರಂದು‌ ರೈತರೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸುವುದಾಗಿ ಸಚಿವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ, ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಬೇಕು ಹಾಗೂ ರೈತರ ಹಿತಾಸಕ್ತಿಗೆ ಧಕ್ಕೆಯಾಗದಂತೆ ಯೋಜನೆಯನ್ನು ಮರುಪರಿಶೀಲಿಸಬೇಕು ಎಂದು ರೈತರು ಮನವಿಯಲ್ಲಿ ಆಗ್ರಹಿಸಿದರು.

ಮನವಿ ಸಲ್ಲಿಸುವ ವೇಳೆ ವಕೀಲ ನರಸಿಂಹಗೌಡ, ರಾಮಣ್ಣ, ಅಶ್ವತ್ಥ್ ನಾರಾಯಣ, ಗೋವಿಂದರಾಜು, ಕೆಂಪರಾಜು, ರಾಜಣ್ಣ, ಸಿದ್ದಲಿಂಗಾಚಾರ್, ವಿನಯ್, ಕುಮಾರ್, ಗಿರೀಶ್, ಲಕ್ಷ್ಮೀನಾರಾಯಣ್, ನರಸಿಂಹಮೂರ್ತಿ, ನಾಗರಾಜು, ಹನುಮಂತಯ್ಯ ಸೇರಿದಂತೆ ವಿವಿಧ ಗ್ರಾಮಗಳ ರೈತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!