
ದೊಡ್ಡಬಳ್ಳಾಪುರ: ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಅರ್ಜುನ್ ವಿರಾಟ್ ಅವರ ಜನ್ಮದಿನದ ಹಿನ್ನೆಲೆ, ಅವರ ಸ್ನೇಹಿತರು ಹಾಗೂ ಒಡನಾಡಿಗಳು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಸರಳವಾಗಿ ಜನ್ಮದಿನ ಆಚರಿಸಿದರು.
ಆಸ್ಪತ್ರೆಗೆ ಭೇಟಿ ನೀಡಿದ ಅವರು, ರೋಗಿಗಳ ಆರೋಗ್ಯ ವಿಚಾರಿಸಿ, ಹಣ್ಣುಹಂಪಲು ವಿತರಿಸಿ ಅರ್ಜುನ್ ವಿರಾಟ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು.
ಈ ವೇಳೆ ಮಾತನಾಡಿದ ಸ್ನೇಹಿತರು ಹಾಗೂ ಒಡನಾಡಿಗಳು, ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸುವ ಬದಲು, ಸಮಾಜಮುಖಿ ಕಾರ್ಯದ ಮೂಲಕ ಆಚರಿಸುವುದು ಉತ್ತಮ. ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದ್ದೇವೆ. ಅರ್ಜುನ್ ವಿರಾಟ್ ಅವರು ಮುಂದಿನ ದಿನಗಳಲ್ಲಿಯೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು, ಯುವಕರಿಗೆ ಮಾದರಿಯಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಚಂದನ್, ಸಂಜಯ್, ಜಯಂತ್, ಜಯಚಂದ್ರ, ಹರ್ಷ, ಅವಿನಾಶ್, ಹೇಮಂತ್, ಸಚಿನ್ ಮತ್ತಿತರರು ಉಪಸ್ಥಿತರಿದ್ದರು.