“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಿಂದ ಹೊರಬರುತ್ತಿದ್ದ ವೇಳೆ ಪೊಲೀಸರು ವಾಟಾಳ್ ನಾಗರಾಜ್ ಅವರನ್ನು ವಶಕ್ಕೆ ಪಡೆದರು. ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಅವರು ಬಂದ್‌ಗೆ ಕರೆ ನೀಡಿದ್ದರು.

ಪೊಲೀಸರು ವಶಕ್ಕೆ ಪಡೆಯುತ್ತಿದ್ದ ವೇಳೆ ವಾಟಾಳ್ ನಾಗರಾಜ್ ಅವರು “ನನಗೆ ನೀರು ಬೇಕು, ನಾನು ಮಾತಾಡುವುದಿಲ್ಲ” ಎಂದು ಹೇಳಿ ಬಾಯಿಗೆ ಪ್ಲಾಸ್ಟರ್ ಹಾಕಿಕೊಂಡು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ಹಿತ ಕಾಪಾಡಬೇಕು ಎಂದು ಆಗ್ರಹಿಸಿ ಹೋರಾಟ ಮುಂದುವರಿಸುವುದಾಗಿ ವಾಟಾಳ್ ನಾಗರಾಜ್ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!