ಕುಡಿಯುವ ನೀರು, ಕೆರೆಗಳ ಶುದ್ಧೀಕರಣಕ್ಕೆ ಆಗ್ರಹಿಸಿ ಅಮರಣಾಂತ ಉಪವಾಸ ಸತ್ಯಾಗ್ರಹ

ದೊಡ್ಡತುಮಕೂರು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಕೊಟ್ಟ ಮಾತಿನಂತೆ ಕುಡಿಯುವ ನೀರನ್ನು ಒದಗಿಸುವಂತೆ ಒತ್ತಾಯಿಸಿ ನಗರದ ತಾಲೂಕು ಕಚೇರಿ ಎದುರು ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಅರ್ಕಾವತಿ ನದಿಪಾತ್ರದ ಕೆರೆಗಳ ಹೋರಾಟ ಸಮಿತಿ ಹಾಗೂ ವಿವಿಧ ಹೋರಾಟ ಸಂಘಟನೆಗಳು.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಹಾಗೂ ನಗರಸಭೆ ವ್ಯಾಪ್ತಿಯ ಕೊಳಚೆ ನೀರು, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ‌ ಕಾರ್ಖಾನೆಗಳ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಬಂದು ಸೇರಿ ಕೆರೆ ನೀರಿನಿಂದ ಹಿಡಿದು ಶುದ್ಧ ಕುಡಿಯುವ ನೀರಿನ ಘಟಕದವರೆಗೂ ಸಂಪೂರ್ಣ ಕಲುಷಿತಗೊಂಡಿರುವ ಕಾರಣ ಜನರು ಕುಡಿಯಲು ನೀರಿಲ್ಲದೆ ಪರದಾಡುವಂತಾಗಿದ್ದು, ಇದಕ್ಕೆ ಕಾರಣಕರ್ತರಾದವರಿಗೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಹಾಗೂ ಕೆರೆ ನೀರನ್ನು ಶುದ್ಧೀಕರಣ ಮಾಡಲು ಹಾಗೂ ಗ್ರಾಮಸ್ಥರಿಗೆ ಕುಡಿಯುವ ನೀರನ್ನು ಒದಗಿಸಬೇಕೆಂದು ಒತ್ತಾಯಿಸಿ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭ ಮಾಡಲಾಗಿದೆ.

Leave a Reply

Your email address will not be published. Required fields are marked *