ಮುಕ್ಕೇನಹಳ್ಳಿ ಗ್ರಾಮದ ಶ್ರೀ ವೇಣುಗೋಪಾಲ‌ ಸ್ವಾಮಿ ದೇವಾಲಯದಲ್ಲಿ ಕಳ್ಳತನ

ದೊಡ್ಡಬಳ್ಳಾಪುರ ತಾಲೂಕಿನ ಮುಕ್ಕೇನಹಳ್ಳಿ ಗ್ರಾಮದ ಶ್ರೀವೇಣು ಗೋಪಾಲಸ್ವಾಮಿ ದೇವಾಲಯದ ಹುಂಡಿ ಸಮೇತ ಕಳ್ಳರು ಪರಾರಿಯಾಗಿರುವ ಘಟನೆ ಗುರುವಾರ ತಡ ರಾತ್ರಿ ನಡೆದಿದೆ.

ಹುಂಡಿಯಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಹಣ ಇತ್ತು ಎಂದು ಗ್ರಾಮಸ್ಥರು ಅಂದಾಜಿಸಿದ್ದಾರೆ. ಈ ಕುರಿತು ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ತಾಲೂಕಿನ ದೇವಾಲಯಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದನ್ನು ನಿಯಂತ್ರಣ ಮಾಡುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿರುವ ಸಾರ್ವಜನಿಕರು.

Leave a Reply

Your email address will not be published. Required fields are marked *