ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ಹೋರಾಟ ವೇದಿಕೆ ಮುಖಂಡರು ಶುದ್ಧ ಕುಡಿಯುವ ನೀರು ಒದಗಿಸಲು ಹಾಗೂ ಕೆರೆಗಳ ಶುದ್ಧೀಕರಣ ಮಾಡುವಂತೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ನಗರದ ತಾಲೂಕು ಕಚೇರಿ ಎದುರು ಹಗಲಿರುಳು ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ನಡೆಸಲಾಗುತ್ತಿತ್ತು.
ಇಂದು ವಿಷಯ ತಿಳಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾ ನಿರತರ ಅಹವಾಲನ್ನು ಸ್ವೀಕರಿಸಿ ನಾಳೆಯಿಂದ ಕುಡಿಯುವ ನೀರನ್ನು ಒದಗಿಸುವುದಾಗಿ ಭರವಸೆ ನೀಡಿದರು.
ನಂತರ ಕೂಡಲೇ ಮಾಜಿ ಶಾಸಕ, ಹಾಲಿ ಶಾಸಕ, ಜಿಲ್ಲಾಧಿಕಾರಿ, ಎಸಿ, ತಹಶೀಲ್ದಾರ್ ಸೇರಿದಂತೆ ಇತರೆ ಇಲಾಖಾಧಿಕಾರಿಗಳ ಸಭೆ ನಡೆಸಿ ಕೆರೆಗಳ ಶುದ್ದೀಕರಣ ಸಂಬಂಧಿಸಿದ ಸಭೆ ನಡೆಸಿ ಸರ್ಕಾರ ಗಮನಕ್ಕೆ ತಂದು ಶಾಶ್ವತ ಪರಿಹಾರ ಒದಗಿಸುವ ಭರವಸೆ ನೀಡಿದ ಹಿನ್ನೆಲೆ ತಾತ್ಕಾಲಿಕ ಉಪವಾಸ ಸತ್ಯಾಗ್ರಹ ಮೊಟಕುಗೊಳಿಸಿದ ಪ್ರತಿಭಟನಾ ನಿರತರು.
ಜಿಲ್ಲಾ ಉಸ್ತುವಾರಿ ಸಚಿವರ ಕಾಲಿಗೆ ಬಿದ್ದು ಶುದ್ಧ ಕುಡಿಯುವ ನೀರು ಒದಗಿಸಿ ನಮ್ಮ ಪ್ರಾಣ ಉಳಿಸುವಂತೆ ಕಣ್ಣೀರಿಟ್ಟ ಉಪವಾಸ ನಿರತ ರೈತ.