ದೊಡ್ಡಬಳ್ಳಾಪುರ ನಗರವನ್ನು ಸ್ವಚ್ಛ, ನೈರ್ಮಲ್ಯ, ಸುಂದರ, ತ್ಯಾಜ್ಯ ಮುಕ್ತ ನಗರವನ್ನಾಗಿಸಲು ನಗರಸಭೆ ಹಾಗೂ ಪರಿವರ್ತನಾ ಮಹಿಳಾ ಮಂಡಲ ವತಿಯಿಂದ ಇಂದು ಸ್ವಚ್ಛ ಜಾಗೃತಿ ಜಾಥಾವನ್ನ ಹಮ್ಮಿಕೊಳ್ಳಲಾಗಿತ್ತು.
ತ್ಯಾಜ್ಯದ ಪ್ರಮಾಣ ಕಡಿಮೆ ಮಾಡಲು, ಮರು ಬಳಕೆ ಹಾಗೂ ಸಂಸ್ಕರಣೆ ಮಾಡುವ ಪರಿಕಲ್ಪನೆ ಮತ್ತು ಎಲ್ಲೆಂದರಲ್ಲಿ ತ್ಯಾಜ್ಯವನ್ನು ಎಸೆಯದಂತೆ ನಗರ ನಿವಾಸಿಗಳಲ್ಲಿ ಅರಿವು ಮೂಡಿಸಲು ನಗರದ ನಗರಸಭೆ ಕಾರ್ಯಾಲಯ ಆವರಣದಲ್ಲಿ ಸ್ವಚ್ಛತಾ ಜಾಥಾಗೆ ಶಾಸಕ ಧೀರಜ್ ಮುನಿರಾಜ್ ಚಾಲನೆ ನೀಡಿದರು.
ನಂತರ ನಗರದ ಪ್ರಮುಖ ಬೀದಿಗಳು, ವೃತ್ತಗಳಲ್ಲಿ ನಡಿಗೆ ಮೂಲಕ ಸಂಚರಿಸಿ ನಗರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯದ ಪ್ರಮಾಣ ತಗ್ಗಿಸಲು ಮತ್ತು ಕಸವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಈ ವೇಳೆ ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮಿನಾರಾಯಣ್, ಉಪಾಧ್ಯಕ್ಷೆ ಫರ್ಹಾನಾ ತಾಜ್, ಸ್ಥಾಯಿ ಸಮಿತಿ ಅಧ್ಯಕ್ಷೆ ಆದಿಲಕ್ಷ್ಮಿ, ಪೌರಾಯುಕ್ತ ಶಿವಶಂಕರ್, ನಗರಸಭೆ ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.