ಗೃಹಜ್ಯೋತಿ: ಆಗಸ್ಟ್ 5ರಂದು ಗೃಹಜ್ಯೋತಿ ಗ್ಯಾರೆಂಟಿಗೆ ಚಾಲನೆ- ಇಂಧನ ಸಚಿವ ಕೆ.ಜೆ.ಜಾರ್ಜ್

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರೆಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಆಗಸ್ಟ್ 5ರಂದು ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯನವರಿಂದ ಚಾಲನೆ ದೊರೆಯಲಿದೆ ಎಂದು ಇಂಧನ ಸಚಿವ ಕೆ‌.ಜೆ.ಜಾರ್ಜ್ ಮಾಹಿತಿ ನೀಡಿದ್ದಾರೆ.

ಜುಲೈ 1 ರಿಂದ ಬಳಸಿದ ವಿದ್ಯುತ್‍ಗೆ ಗೃಹಜ್ಯೋತಿ ಯೋಜನೆಯಡಿ ಶುಲ್ಕ ವಿನಾಯಿತಿ ನೀಡಲಾಗುತ್ತಿದೆ. ಗೃಹಜ್ಯೋತಿ ಯೋಜನೆಯಡಿ ಈವರೆಗೂ 1.40 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದಾರೆ. ಜುಲೈ ತಿಂಗಳಿನ ಬಿಲ್‍ನಲ್ಲಿ ಒಂದಿಷ್ಟು ಗೊಂದಲವಿದೆ. ಜೂನ್‍ನಲ್ಲಿ ಬಳಕೆಯಾದ ವಿದ್ಯುತ್‍ಗೆ ಜುಲೈನಲ್ಲಿ ಬಿಲ್ ನೀಡಲಾಗಿದೆ ಎಂದರು.

ಜುಲೈ 1 ರಿಂದ 15 ರವರೆಗೆ ಬಳಸಿದ ವಿದ್ಯುತ್ ಸೇರಿ ಬಿಲ್ ನೀಡಿರುವುದರಿಂದ ಗ್ರಾಹಕರು ಹಣ ಪಾವತಿ ಮಾಡಿದ್ದಾರೆ. ಯೋಜನೆ ಜುಲೈ 1 ರಿಂದ ಜಾರಿಯಾಗಿರುವುದರಿಂದ ಗ್ರಾಹಕರು ಪಾವತಿಸಿದ 15 ದಿನಗಳ ವಿದ್ಯುತ್ ಶುಲ್ಕವನ್ನು ಮರು ಪಾವತಿಸಲಾಗುವುದು ಎಂದು ಗ್ರಾಹಕರ ವಿದ್ಯುತ್ ಬಾಕಿಗೆ ಇದನ್ನು ಹೊಂದಾಣಿಕೆ ಮಾಡಿಕೊಳ್ಳಲಾಗುತ್ತದೆ. ಒಂದು ವೇಳೆ ಯಾವುದೇ ಬಾಕಿ ಉಳಿದಿಲ್ಲವಾದರೆ, ಪಾವತಿಸಿದ ಹಣವನ್ನು ಗ್ರಾಹಕರಿಗೆ ಮರು ನಗದೀಕರಿಸುವುದಾಗಿ ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *