77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ನಗರದ ಲೋಕೋಪಯೋಗಿ ಇಲಾಖೆ ಕಚೇರಿ ಆವರಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು.
200 ವರ್ಷಗಳಿಗೂ ಹೆಚ್ಚು ಕಾಲ ಬ್ರಿಟಿಷರು ಭಾರವನ್ನು ಆಳಿದರು. ಹಲವು ತ್ಯಾಗ ಬಲಿದಾನಗಳು, ಹೋರಾಟಗಳಿಂದ 1947 ರ ಆಗಸ್ಟ್ 15 ರಂದು
ಬ್ರಿಟಿಷ್ ವಸಾಹತುಶಾಹಿಯ ಹಿಡಿತದಿಂದ ಭಾರತವು ವಿಮೋಚನೆಗೊಂಡಿತು. ರಾಷ್ಟ್ರಧ್ವಜ ಹಾಗೂ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಲೋಕೋಪಯೋಗಿ ಇಲಾಖೆಯ ಎಇಇ ಎಸ್.ಆರ್.ಜಯಪ್ರಕಾಶ್.
ಈ ವೇಳೆ ಎಇ ಮರುಳಿ, ಪರುಶುರಾಮ್, ಗುತ್ತಿಗೆದಾರರಾದ ಆನಂದ್, ಮುರುಳಿ, ನಿಖಿಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.