2023-24 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಹಾಗೂ ತೋಟಗಾರಿಕೆಯಲ್ಲಿ ಯಾಂತ್ರೀಕರಣ(SMAM) ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ ಅನುಷ್ಠಾನಗೊಳಿಸತ್ತಿದ್ದು, ಸದರಿ ಯೋಜನೆಯಡಿ
1). ಪ್ರದೇಶ ವಿಸ್ತರಣೆ ಕಾರ್ಯಕ್ರಮ ( ಮಾವು, ಬಾಳೆ, ಸೀಬೆ, ಹೈಬ್ರಿಡ್ ತರಕಾರಿ )
2). ರೋಗ ಮತ್ತು ಕೀಟ ನಿಯಂತ್ರಣ
3). ಪ್ಲಾಸ್ಟಿಕ್ ಹೊದಿಕೆ
4). ಹಸಿರುಮನೆ ನಿರ್ಮಾಣ
5). ಶೇಡ್ ನೆಟ್ ಹೌಸ್
6). ವೈಯಕ್ತಿಕ ಕೃಷಿಹೊಂಡ,
7).ಪ್ಯಾಕ್ ಹೌಸ್ ಹಾಗೂ
8). ಯಂತ್ರ/ಉಪಕರಣಗಳನ್ನು ಖರೀದಿಸಲು ತೋಟಗಾರಿಕೆಯಲ್ಲಿ ಯಾಂತ್ರೀಕರಣ(SMAM) ಫಲಾನುಭವಿಗಳು ಸಹಾಯಧನವನ್ನು ಪಡೆಯಬಹುದಾಗಿರುತ್ತದೆ.
2023-24 ನೇ ಸಾಲಿನಲ್ಲಿ ಸದರಿ ಕಾರ್ಯಕ್ರಮದಡಿ ಘಟಕಗಳನ್ನು ಮಾರ್ಗಸೂಚಿಯನ್ವಯ ನಿರ್ಮಿಸಿಕೊಂಡು ಸಹಾಯಧನ ಪಡೆಯಲು ಇಚ್ಛಿಸುವ/ ಆಸಕ್ತಿಯುಳ್ಳ ರೈತರು 2023 ರ ಆಗಸ್ಟ್ 31 ರೊಳಗೆ ಅರ್ಜಿ ಸಮೇತ ಅಗತ್ಯವಾದ ದಾಖಲೆಗಳನ್ನು ಸಂಬಂಧಪಟ್ಟ ತಾಲ್ಲೂಕುಗಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯಲ್ಲಿ ಸಲ್ಲಿಸಬೇಕು.
ಸರ್ಕಾರ ನಿಗದಿಪಡಿಸಿದ ಮಾರ್ಗಸೂಚಿ ಹಾಗೂ ಲಭ್ಯವಿರುವ ಅನುದಾನದ ಮೇರೆಗೆ ಜೇಷ್ಠತಾವಾರು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಆದ್ದರಿಂದ ತಾಲ್ಲೂಕಿನ ರೈತರು ಈ ಯೋಜನೆಗಳ ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ಹೋಬಳಿ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸುವುದು.
ತಾಲ್ಲೂಕು ಮತ್ತು ಹೋಬಳಿ ಮಟ್ಟದ ಅಧಿಕಾರಿಗಳು
ದೂರವಾಣಿ ಸಂಖ್ಯೆ
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ),ನೆಲಮಂಗಲ.
9880461607
ಸಹಾಯಕ ತೋಟಗಾರಿಕೆ ನಿರ್ದೇಶಕರು, (ತಾ.ಸ), ನೆಲಮಂಗಲ.
9902581832
ಸಹಾಯಕ ತೋಟಗಾರಿಕೆ ಅಧಿಕಾರಿ, ಕಸಬಾ ಹೋಬಳಿ
7337866626
ಸಹಾಯಕ ತೋಟಗಾರಿಕೆ ಅಧಿಕಾರಿ, ಸೋಪುರ ಹೋಬಳಿ
8884829971
ಸಹಾಯಕ ತೋಟಗಾರಿಕೆ ಅಧಿಕಾರಿ, ತ್ಯಾಮಗೊಂಡ್ಲು ಹೋಬಳಿ
8197655732 ಸಂಪರ್ಕಿಸಬಹುದಾಗಿದೆ ಎಂದು ನೆಲಮಂಗಲ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿ.ಪಂ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.