ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ತುಮಕೂರಿನಲ್ಲಿ ಆಯೋಜನೆ ಮಾಡಲಾಗಿತ್ತು. ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳನ್ನ ಆಯೋಜನೆ ಮಾಡಲಾಗಿತ್ತು. ಈ ಕ್ರೀಡಾಕೂಟದ ಮಹಿಳಾ ಚೆಸ್ ವಿಭಾಗದಲ್ಲಿ ಉತ್ತಮವಾಗಿ ತಮ್ಮ ಆಟದ ಕೌಶಲ್ಯ ಪ್ರದರ್ಶನ ಮಾಡುವ ಮೂಲಕ ಗೆದ್ದು ಬೀಗಿದ ತಾಲ್ಲೂಕಿನ ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಜಯಶ್ರೀ.
ರಾಜ್ಯಮಟ್ಟದಲ್ಲಿ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಗೋವಾದಲ್ಲಿ ನಡೆಯುವ ರಾಷ್ಟ್ರಮಟ್ಟದ ಮಹಿಳಾ ಚೆಸ್ ಸ್ಪರ್ಧೆಗೆ ಆಯ್ಕೆ ಆಗಿ ತಾಲೂಕಿಗೆ ಕೀರ್ತಿತಂದಿದ್ದಾರೆ.
ಜಯಶ್ರೀ ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೋಬಳಿಯ ಲಿಂಗದವೀರನಹಳ್ಳಿ ಮಜರಾ ಪುಟ್ಟಲಿಂಗಯ್ಯನಪಾಳ್ಯದವರಾಗಿದ್ದು, ಪ್ರಸ್ತುತ ನಗರದ ಅರಳುಮಲ್ಲಿಗೆ ಬಾಗಿಲು ಪ್ರೌಢಶಾಲೆಯಲ್ಲಿ ಸಹಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ರಾಷ್ಟ್ರಮಟ್ಟದ ಚೆಸ್ ವಿಭಾಗಕ್ಕೆ ಆಯ್ಕೆಯಾದ ಶಿಕ್ಷಕಿ ಜಯಶ್ರೀ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಪ್ರಶಂಸನಾ ಪತ್ರ ನೀಡುವ ಮೂಲಕ ಅಭಿನಂದಿಸಿದರು.
ಅದೇರೀತಿ ತಾಲೂಕಿನ ಶಿಕ್ಷಕ ಹಾಗೂ ಸರ್ಕಾರಿ ನೌಕರರ ಸಂಘವೂ ಸಹ ಅಭಿನಂದನೆ ಸಲ್ಲಿಸಿ ರಾಷ್ಟ್ರಮಟ್ಟದಲ್ಲೂ ವಿಜಯಶಾಲಿಯಾಗಲೆಂದು ಶುಭ ಹಾರೈಸಿದ್ದಾರೆ.