ಹಿಟ್ ಅಂಡ್ ರನ್ ಗೆ ಪಾದಾಚಾರಿ ಬಲಿಯಾಗಿರುವ ಘಟನೆ ನಗರದ ಹೊರವಕಯದ ರೈಲ್ವೆ ನಿಲ್ದಾಣ ಸಮೀಪ ನ.9ರ ಸಂಜೆ ಸುಮಾರು 7ಗಂಟೆ ಸಮಯದಲ್ಲಿ ನಡೆದಿದೆ.
ಕದೀರ್ ಪಾಷಾ(26), ಹಿಟ್ & ರನ್ ಗೆ ಬಲಿಯಾದ ಪಾದಚಾರಿ.
ಕದೀರ್ ಪಾಷಾ ಅವರು ರೈಲ್ವೆ ನಿಲ್ದಾದಲ್ಲಿ ಕೆಲಸ ಮುಗಿಸಿಕೊಂಡು ರಸ್ತೆ ಪಕ್ಕದಲ್ಲಿ ನಡೆದುಕೊಂಡು ಮನೆಗೆ ತೆರಳುವಾಗ ಯಾವುದೋ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಸ್ಥಳದಿಂದ ಎಸ್ಕೇಪ್ ಆಗಿದೆ. ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಕದೀರ್ ಪಾಷಾ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ಒದಗಿಬಂದಿದೆ.
ಮಿನಿ ಕ್ಯಾಂಟರ್ ಡಿಕ್ಕಿ ಹೊಡೆದಿರಬಹುದು ಎಂದು ಪೊಲೀಸ್ ಸಿಬ್ಬಂದಿ ಶಂಕಿಸಿದ್ದಾರೆ. ಘಟನಾ ಸ್ಥಳದ ಸಮೀಪವಿರುವ ಸಿಸಿಟಿವಿ ಪರಿಶೀಲನೆ ಮಾಡುತ್ತಿರುವ ಪೊಲೀಸ್ ಇಲಾಖೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.