ಖಾಸಗಿ ಕಂಪನಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿತ್ತು. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ಜೆ.ಕೆ. ಪೇಂಟ್ಸ್ ಕಾರ್ಖಾನೆ ಬಳಿ ಇಂದು ಮಧ್ಯಾಹ್ನ ನಡೆದಿತ್ತು.
ಮನೋಜ್ (19) ಅಪಘಾತದಲ್ಲಿ ಸಾವನ್ನಪ್ಪಿರುವ ಯುವಕ ಎಂದು ಗುರುತಿಸಲಾಗಿದೆ.
ಮೃತ ಯುವಕ ನಗರದ ಹೊರವಲಯದಲ್ಲಿರುವ ಗೀತಂ ಯೂನಿವರ್ಸಿಟಿಯಲ್ಲಿ ಮೊದಲ ವರ್ಷದ ಬಿಟೆಕ್ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ಇಂದು ಕ್ರಿಸ್ ಮಸ್ ರಜೆ ಹಿನ್ನೆಲೆ ಅನ್ಯ ಕೆಲಸದ ನಿಮಿತ್ತ ವಿದ್ಯಾರ್ಥಿಗಳು ಹೊರಗೆ ಬಂದಿದ್ದರು ಎಂದು ತಿಳಿದುಬಂದಿದೆ.
ಮೃತ ವಿದ್ಯಾರ್ಥಿ ಶವವನ್ನು ದೊಡ್ಡಬಳ್ಳಾಪುರ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಘುನಾಥಪುರದಿಂದ ಬೈಕ್ ಬರುತ್ತಿತ್ತು, ಡಿಕ್ರಾಸ್ ಕಡೆಯಿಂದ ಖಾಸಗಿ ಕಂಪನಿ ಬಸ್ ಆಗಮಿಸುತ್ತಿತ್ತು. ಮೊದಲು ಬೈಕ್ ಗೆ ಕಾರೊಂದು ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಬಸ್ಸಿನಡಿ ಬೈಕ್ ಬೀಳುತ್ತದೆ. ಸುಮಾರು 100 ಅಡಿ ದೂರದಷ್ಟು ಬೈಕ್ ನ್ನು ಬಸ್ ಎಳೆದೊಯ್ದಿದೆ. ಈ ವೇಳೆ ಬೈಕ್ ಸವಾರರು ಗಂಭೀರ ಗಾಯಗೊಂಡಿರುತ್ತಾರೆ. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…