ಖಾಸಗಿ ಕಂಪನಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿತ್ತು. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ಜೆ.ಕೆ. ಪೇಂಟ್ಸ್ ಕಾರ್ಖಾನೆ ಬಳಿ ಇಂದು ಮಧ್ಯಾಹ್ನ ನಡೆದಿತ್ತು.
ಮನೋಜ್ (19) ಅಪಘಾತದಲ್ಲಿ ಸಾವನ್ನಪ್ಪಿರುವ ಯುವಕ ಎಂದು ಗುರುತಿಸಲಾಗಿದೆ.
ಮೃತ ಯುವಕ ನಗರದ ಹೊರವಲಯದಲ್ಲಿರುವ ಗೀತಂ ಯೂನಿವರ್ಸಿಟಿಯಲ್ಲಿ ಮೊದಲ ವರ್ಷದ ಬಿಟೆಕ್ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ಇಂದು ಕ್ರಿಸ್ ಮಸ್ ರಜೆ ಹಿನ್ನೆಲೆ ಅನ್ಯ ಕೆಲಸದ ನಿಮಿತ್ತ ವಿದ್ಯಾರ್ಥಿಗಳು ಹೊರಗೆ ಬಂದಿದ್ದರು ಎಂದು ತಿಳಿದುಬಂದಿದೆ.
ಮೃತ ವಿದ್ಯಾರ್ಥಿ ಶವವನ್ನು ದೊಡ್ಡಬಳ್ಳಾಪುರ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಘುನಾಥಪುರದಿಂದ ಬೈಕ್ ಬರುತ್ತಿತ್ತು, ಡಿಕ್ರಾಸ್ ಕಡೆಯಿಂದ ಖಾಸಗಿ ಕಂಪನಿ ಬಸ್ ಆಗಮಿಸುತ್ತಿತ್ತು. ಮೊದಲು ಬೈಕ್ ಗೆ ಕಾರೊಂದು ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಬಸ್ಸಿನಡಿ ಬೈಕ್ ಬೀಳುತ್ತದೆ. ಸುಮಾರು 100 ಅಡಿ ದೂರದಷ್ಟು ಬೈಕ್ ನ್ನು ಬಸ್ ಎಳೆದೊಯ್ದಿದೆ. ಈ ವೇಳೆ ಬೈಕ್ ಸವಾರರು ಗಂಭೀರ ಗಾಯಗೊಂಡಿರುತ್ತಾರೆ. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್ಗಾಗಿ ಆಗ್ರಹಿಸಿ ಮಾ.6ರಂದು ಬೆಂಗಳೂರಿನ…
ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…