ಖಾಸಗಿ ಕಂಪನಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿತ್ತು. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ಜೆ.ಕೆ. ಪೇಂಟ್ಸ್ ಕಾರ್ಖಾನೆ ಬಳಿ ಇಂದು ಮಧ್ಯಾಹ್ನ ನಡೆದಿತ್ತು.
ಮನೋಜ್ (19) ಅಪಘಾತದಲ್ಲಿ ಸಾವನ್ನಪ್ಪಿರುವ ಯುವಕ ಎಂದು ಗುರುತಿಸಲಾಗಿದೆ.
ಮೃತ ಯುವಕ ನಗರದ ಹೊರವಲಯದಲ್ಲಿರುವ ಗೀತಂ ಯೂನಿವರ್ಸಿಟಿಯಲ್ಲಿ ಮೊದಲ ವರ್ಷದ ಬಿಟೆಕ್ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ಇಂದು ಕ್ರಿಸ್ ಮಸ್ ರಜೆ ಹಿನ್ನೆಲೆ ಅನ್ಯ ಕೆಲಸದ ನಿಮಿತ್ತ ವಿದ್ಯಾರ್ಥಿಗಳು ಹೊರಗೆ ಬಂದಿದ್ದರು ಎಂದು ತಿಳಿದುಬಂದಿದೆ.
ಮೃತ ವಿದ್ಯಾರ್ಥಿ ಶವವನ್ನು ದೊಡ್ಡಬಳ್ಳಾಪುರ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಘುನಾಥಪುರದಿಂದ ಬೈಕ್ ಬರುತ್ತಿತ್ತು, ಡಿಕ್ರಾಸ್ ಕಡೆಯಿಂದ ಖಾಸಗಿ ಕಂಪನಿ ಬಸ್ ಆಗಮಿಸುತ್ತಿತ್ತು. ಮೊದಲು ಬೈಕ್ ಗೆ ಕಾರೊಂದು ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಬಸ್ಸಿನಡಿ ಬೈಕ್ ಬೀಳುತ್ತದೆ. ಸುಮಾರು 100 ಅಡಿ ದೂರದಷ್ಟು ಬೈಕ್ ನ್ನು ಬಸ್ ಎಳೆದೊಯ್ದಿದೆ. ಈ ವೇಳೆ ಬೈಕ್ ಸವಾರರು ಗಂಭೀರ ಗಾಯಗೊಂಡಿರುತ್ತಾರೆ. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…