ನೆಲಮಂಗಲದ ಜಿಂದಾಲ್ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 12 ಗಂಟೆಯ ಸುಮಾರಿಗೆ ತುಮಕೂರು ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಕಾ ಕಾರು, ಬೆಂಗಳೂರಿನಿಂದ ಹೊರಟಿದ್ದ KSRTC ಬಸ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ, ಕಾರಿನಲ್ಲಿದ್ದ ಎಲ್ಲಾ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವೇಗವಾಗಿ ಬರುತ್ತಿದ್ದ ಕಾರು ಹೆದ್ದಾರಿಯ ಡಿವೈಡರ್ ಹಾರಿ ಬಸ್ಗೆ ಡಿಕ್ಕಿ ಹೊಡೆದಿದ್ದೇ ಈ ದುರಂತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಮೃತ ದುರ್ದೈವಿಗಳನ್ನು ದೊಡ್ಡಬಳ್ಳಾಪುರದ ಬಸವ ಭವನ ಸಮೀಪದ ನಿವಾಸಿ ಲಲಿತ್, ತಿಪ್ಪಾಪುರದ ಹರ್ಷಿತ್ ಸಿ, ದೇವರಾಜ ನಗರದ ದುರ್ಗಾಪ್ರಸಾದ್, ಕರೇನಹಳ್ಳಿ ಧನುಷ್, ಕಲ್ ಪೇಟೆ ನಿವಾಸಿ ಕೇಶವ್ ಎಂ ಎಂದು ಗುರುತಿಸಲಾಗಿದೆ…
ಮೃತ ಹರ್ಷಿತ್ ರಾಜನಕುಂಟೆ ಸಾಯಿ ವಿದ್ಯಾ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ದ್ವಿತೀಯ ವರ್ಷದ ಡಿಗ್ರಿ ಓದುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ. ಅಪಘಾತದ ರಭಸಕ್ಕೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದರೆ, ಗಂಭೀರ ಗಾಯಗೊಂಡಿದ್ದ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತನೂ ಪ್ರಾಣ ಬಿಟ್ಟಿದ್ದಾನೆ.
ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಐವರ ಮೃತದೇಹ ರವಾನೆ ಮಾಡಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…