Accident: ಚಲಿಸುತ್ತಿದ್ದ KSRTC ಬಸ್ಸಿಂದ ಆಯತಪ್ಪಿ ಬಿದ್ದ ಮಹಿಳೆ: ಸ್ಥಳದಲ್ಲೇ ಸಾವು

ಮಹಿಳೆಯೋರ್ವರು ಚಲಿಸುತ್ತಿದ್ದ KSRTC ಬಸ್ಸಿಂದ ಆಯತಪ್ಪಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡರಾಯಪ್ಪನಹಳ್ಳಿ ಬಳಿ ಇಂದು ಮಧ್ಯಾಹ್ನ ನಡೆದಿದೆ.

ಮೃತ ದುರ್ದೈವಿಯನ್ನು ದೊಡ್ಡರಾಯಪ್ಪನಹಳ್ಳಿ ನಿವಾಸಿ ಶಶಿಕಲಾ (45) ಎಂದು ಗುರುತಿಸಲಾಗಿದೆ.

ಮೆಳೇಕೋಟೆ ಕ್ರಾಸ್‌ಗೆ KSRTC ಬಸ್ಸಿನಲ್ಲಿ ಬರುವ ವೇಳೆ ಬಸ್ಸಿನ ಹಿಂದಿನ ಬಾಗಿಲಿಂದ ಆಯತಪ್ಪಿ ಬಿದ್ದು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!