ಅಮೆರಿಕ – ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಅಯಾತೊಲ್ಲ ಅಲಿ ಖಮೇನಿ ಸಾವಿನಪ್ಪಿರುವ ಸುದ್ದಿ ಕೇಳಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.
ಗ್ರಾಮದಲ್ಲಿ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನ ಸಂಪೂರ್ಣ ಬಂದ್ ಮಾಡಲಾಗಿದೆ. 3 ದಿನಗಳ ಕಾಲ ಕರಾಳ ದಿನ ಆಚರಣೆ ಮಾಡಲು ತೀರ್ಮಾನಿಸಲಾಗಿದೆ.
ಬೇಬಿ ಅಪ್ ಇರಾನ್ ಅಂತಲೇ ಕರೆಸಿಕೊಳ್ಳುವ ಅಲೀಪುರ ಗ್ರಾಮಕ್ಕೆ 1986 ರಲ್ಲಿ ಖಮೇನಿ ಭೇಟಿ ನೀಡಿದ್ರು. ಇವರ ಹೆಸ್ರಲ್ಲಿ ಆಸ್ಪತ್ರೆ ಸಹ ಈ ಗ್ರಾಮದಲ್ಲಿದೆ. ಖಮೇನಿ ಅಂದ್ರೆ ಇಲ್ಲಿನ ಜನರಿಗೆ ಪೂಜ್ಯ ಮತ್ತು ಗೌರವ ಭಾವ. ಹಾಗಾಗಿ ಅವರ ಸಾವಿನ ಸುದ್ದಿಯಿಂದ ಅಲೀಪುರ ಸ್ತಬ್ಧವಾಗಿದೆ. ಇನ್ನೂ ಅಲೀಪುರದ ಕೆಲವರು ಧಾರ್ಮಿಕ ಶಿಕ್ಷಣ ಪಡೆಯುವ ಸಲುವಾಗಿ ಇರಾನ್ ನಲ್ಲಿ ನೆಲೆಸಿದ್ದಾರೆ. ಕೆಲ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದಾರೆ.
ಇರಾನ್ನಲ್ಲಿ ಯುದ್ಧ ಸಂಭವಿಸಿದಾಗಲೆಲ್ಲಾ ಇಲ್ಲಿನ ಜನರ ಹೃದಯ ಕಲುಕುತ್ತೆ. ತಮ್ಮವರಿಗೆ ಏನಾಯ್ತೋ ಅನ್ನೋ ಆತಂಕ ಮನೆ ಮಾಡುತ್ತೆ. ಸದ್ಯ ಅಲೀಪುರ ಗ್ರಾಮ ಮೌನಕ್ಕೆ ಜಾರಿದೆ.
ಒಳಮೀಸಲಾತಿ ವಿಷಯದಲ್ಲಿ ನಾಗಮೋಹನ್ ದಾಸ್ ಆಯೋಗ ನೀಡಿರುವ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ…
ಗ್ರಾಮ ಪಂಚಾಯಿತಿ ಕೂಗಳತೆ ದೂರದಲ್ಲಿರುವ ಹೆಚ್ಚು ದಲಿತರು ಇರುವ ಕಾಲೋನಿಯಲ್ಲಿ ಚರಂಡಿ ವ್ಯವಸ್ಥೆ ಅಸಮರ್ಪಕವಾಗಿದ್ದು, ಸಾಂಕ್ರಾಮಿಕ ರೋಗ ಭೀತಿ ಆವರಿಸಿದೆ.…
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಡಿವೈಡರ್ಗೆ ಬಸ್ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಡೆದಿದೆ... ಕೇರಳ ಮೂಲದ…
ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರ ಪೆಟ್ರೋಲ್ ಬಂಕ್ ಸಮೀಪದ ತಿರುವಿನಲ್ಲಿ ಪದೇ ಪದೇ ಅಪಘಾತ ಪ್ರಕರಣಗಳು ಮರುಕಳಿಸುತ್ತಿವೆ....…
ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ 2026-27ನೇ ಸಾಲಿನ ಬಜೆಟ್ ಕುರಿತ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಮಾ.23ರಂದು ಹಮ್ಮಿಕೊಳ್ಳಲಾಗಿದೆ. ಪಟ್ಟಣ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಯುವಕರ ಬಾಂಧವ್ಯ ಹೆಚ್ಚಾಗಲು ಎರಡನೇ ವರ್ಷದ ಕ್ರಿಕೆಟ್ ಆಯೋಜನೆ ಯಶಸ್ವಿಯಾಗಿದೆ. ಈ ಕ್ರೀಡಾಕೂಟದಲ್ಲಿ ಜೈ…