ಅಮೆರಿಕ – ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಅಯಾತೊಲ್ಲ ಅಲಿ ಖಮೇನಿ ಸಾವಿನಪ್ಪಿರುವ ಸುದ್ದಿ ಕೇಳಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.
ಗ್ರಾಮದಲ್ಲಿ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನ ಸಂಪೂರ್ಣ ಬಂದ್ ಮಾಡಲಾಗಿದೆ. 3 ದಿನಗಳ ಕಾಲ ಕರಾಳ ದಿನ ಆಚರಣೆ ಮಾಡಲು ತೀರ್ಮಾನಿಸಲಾಗಿದೆ.
ಬೇಬಿ ಅಪ್ ಇರಾನ್ ಅಂತಲೇ ಕರೆಸಿಕೊಳ್ಳುವ ಅಲೀಪುರ ಗ್ರಾಮಕ್ಕೆ 1986 ರಲ್ಲಿ ಖಮೇನಿ ಭೇಟಿ ನೀಡಿದ್ರು. ಇವರ ಹೆಸ್ರಲ್ಲಿ ಆಸ್ಪತ್ರೆ ಸಹ ಈ ಗ್ರಾಮದಲ್ಲಿದೆ. ಖಮೇನಿ ಅಂದ್ರೆ ಇಲ್ಲಿನ ಜನರಿಗೆ ಪೂಜ್ಯ ಮತ್ತು ಗೌರವ ಭಾವ. ಹಾಗಾಗಿ ಅವರ ಸಾವಿನ ಸುದ್ದಿಯಿಂದ ಅಲೀಪುರ ಸ್ತಬ್ಧವಾಗಿದೆ. ಇನ್ನೂ ಅಲೀಪುರದ ಕೆಲವರು ಧಾರ್ಮಿಕ ಶಿಕ್ಷಣ ಪಡೆಯುವ ಸಲುವಾಗಿ ಇರಾನ್ ನಲ್ಲಿ ನೆಲೆಸಿದ್ದಾರೆ. ಕೆಲ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದಾರೆ.
ಇರಾನ್ನಲ್ಲಿ ಯುದ್ಧ ಸಂಭವಿಸಿದಾಗಲೆಲ್ಲಾ ಇಲ್ಲಿನ ಜನರ ಹೃದಯ ಕಲುಕುತ್ತೆ. ತಮ್ಮವರಿಗೆ ಏನಾಯ್ತೋ ಅನ್ನೋ ಆತಂಕ ಮನೆ ಮಾಡುತ್ತೆ. ಸದ್ಯ ಅಲೀಪುರ ಗ್ರಾಮ ಮೌನಕ್ಕೆ ಜಾರಿದೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…