ಎಂದಿನಂತೆ ಬಿಎಂಟಿಸಿ ಬಸ್ ಚಾಲಕ ತನಗೆ ನೀಡಿರುವ ರೂಟ್ ನಲ್ಲಿ ಬಸ್ ಚಾಲನೆ ಮಾಡಿಕೊಂಡು ಹೋಗವಾಗ ಮಾರ್ಗ ಮಧ್ಯೆ ಹಠಾತ್ ನೆ ಅನಾರೋಗ್ಯಕ್ಕೆ ತುತ್ತಾಗುತ್ತಾನೆ. ಇದನ್ನು ಕಂಡ ಎಸಿಪಿ ರಾಮಚಂದ್ರರವರು ಬಸ್ ಚಾಲಕನನ್ನು ಆಸ್ಪತ್ರೆಗೆ ರವಾನಿಸಿ ಪ್ರಯಾಣಿಕರ ಹಿತದೃಷ್ಟಿಯಿಂದ ಸ್ವತಃ ತಾವೇ ಬಸ್ ಚಾಲನೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಶಿವಾಜಿ ನಗರ-ಕಾಡುಗೋಡಿ ಮಾರ್ಗದ ಬಿಎಂಟಿಸಿ ಬಸ್ ಡ್ರೈವರ್ ಗೆ ಚಾಲನೆ ವೇಳೆ ಅನಾರೋಗ್ಯಕ್ಕೆ ತುತ್ತು. ಅನ್ಯಾರೋಗ್ಯ ಹಿನ್ನೆಲೆ ಓಲ್ಡ್ ಏರ್ ಪೋರ್ಟ್ ಕಮಾಂಡ್ ಆಸ್ಪತ್ರೆ ಬಳಿ ಬಸ್ಸ್ ನಿಲ್ಲಿಸಿದ ಬಸ್ ಚಾಲಕ. ಇದನ್ನು ಕಂಡ ನಗರಕ್ಕೆ ವಿವಿಐಪಿಗಳ ಆಗಮನ ಹಿನ್ನೆಲೆ ಓಲ್ಡ್ ಏರ್ ಪೊರ್ಟ್ ರಸ್ತೆಯಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಎಸಿಪಿ ರಾಮಚಂದ್ರ. ಬಿಎಂಟಿಸಿ ಬಸ್ ಚಾಲಕನನ್ನು ಅಂಬುಲೈನ್ಸ್ ಮೂಲಕ ಬೌರಿಂಗ್ ಆಸ್ಪತ್ರೆಗೆ ರವಾನಿಸಿ, ಪ್ರಯಾಣಿಕರ ಹಿತದೃಷ್ಟಿಯಿಂದ ಸ್ವತಃ ತಾವೇ ಒಂದು ಕಿಲೋ ಮೀಟರ್ ದೂರದವರೆಗೆ ಬಸ್ ಚಾಲನೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಸದ್ಯ ಎಸಿಪಿ ಅವರು ಬಸ್ ಚಾಲನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದ್ದು ಎಸಿಪಿ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…