BMTC ಮತ್ತು ವಾಯುವಜ್ರ ಎಲೆಕ್ಟ್ರಿಕ್ ಬಸ್ ಗಳಿಗೆ ಚಾಲನೆ

ಸಾರಿಗೆ ಇಲಾಖೆಯ ವತಿಯಿಂದ ಸಾರ್ವಜನಿಕರ ಪ್ರಯಾಣಕ್ಕಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ಆಹಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ  ಕೆ.ಹೆಚ್.ಮುನಿಯಪ್ಪ ಅವರು ಕೆ.ಎಸ್.ಆರ್.ಟಿ.ಸಿ ಮತ್ತು ಬಿ.ಎಂ.ಟಿ.ಸಿ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿ, ಬಸ್ ಗಳಿಗೆ ಹಸಿರು ನಿಶಾನೆ ತೋರಿದರು.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಎಲ್ಲಾ ಸೌಲಭ್ಯಗಳನ್ನು ಹೊಂದಿದ್ದು ಇದು ಎಲ್ಲಾ ವಿಮಾನ ನಿಲ್ದಾಣ ಗಳಿಗಿಂತ ವಿಭಿನ್ನವಾಗಿದೆ ಮತ್ತು ಅತಿ ದೊಡ್ದ ವಿಮಾನ ನಿಲ್ದಾಣವಾಗಿದೆ.

ವಿಮಾನ ನಿಲ್ದಾಣದಿಂದ ಬೆಂಗಳೂರು ನಗರಕ್ಕೆ ಸಂಚಾರ ಮಾಡಲು BMTC ಮತ್ತು  ವಾಯುವಜ್ರದ ಎಲೆಕ್ಟ್ರಿಕ್ ಬಸ್ ಗಳ ಸೇವೆಯನ್ನು ಕಲ್ಪಿಸಿದ್ದು   ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಸ್ ಗಳನ್ನು ನೀಡಲು ಸಚಿವರು ಒಪ್ಪಿಗೆ ಯನ್ನು ನೀಡಿದರು.

ದೇವನಹಳ್ಳಿ ತಾಲ್ಲೂಕಿನ  ತೂಬಗೆರೆ ಪಂಚಾಯತಿಗೆ ಬಸ್ ಗಳು ಅನಾನುಕೂಲ ಇರುವುದರಿಂದ ಅಲ್ಲಿಗೆ ಸಂಪರ್ಕ ಕಲ್ಪಿಸಲು ಸಾರಿಗೆ ಸಚಿವರಿಗೆ ಮನವಿಯನ್ನು ನೀಡಲಾಯಿತು.

ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್ಎಸ್ ಘಾಟಿ ಸುಬ್ರಮಣ್ಯ ದೇವಸ್ಥಾನ ಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಭಕ್ತಾದಿಗಳು ಬರುವುದರಿಂದ ಬಸ್ ವ್ಯವಸ್ಥೆಗಳು ಹಾಗೂ ಅನ್ನ ದಾಸೋಹ ಭವನವನ್ನು ನಿರ್ಮಾಣ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವರಿಗೆ ಮನವಿಯನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ವ್ಯವಸ್ಥಾಪಕ ನಿರ್ದೇಶಕರಾದ ಸತ್ಯವತಿ, ಮುಖ್ಯ ಕಾರ್ಯನಿರ್ವಾಹಕ  ಸತ್ಯಕಿರಘುನಾಥ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ್.ಎನ್ ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿ, ಹಾಗೂ ಸಾರಿಗೆ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

31 minutes ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

1 hour ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

3 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

9 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

11 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

13 hours ago