ಸಾರಿಗೆ ಇಲಾಖೆಯ ವತಿಯಿಂದ ಸಾರ್ವಜನಿಕರ ಪ್ರಯಾಣಕ್ಕಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ಆಹಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಕೆ.ಎಸ್.ಆರ್.ಟಿ.ಸಿ ಮತ್ತು ಬಿ.ಎಂ.ಟಿ.ಸಿ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿ, ಬಸ್ ಗಳಿಗೆ ಹಸಿರು ನಿಶಾನೆ ತೋರಿದರು.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಎಲ್ಲಾ ಸೌಲಭ್ಯಗಳನ್ನು ಹೊಂದಿದ್ದು ಇದು ಎಲ್ಲಾ ವಿಮಾನ ನಿಲ್ದಾಣ ಗಳಿಗಿಂತ ವಿಭಿನ್ನವಾಗಿದೆ ಮತ್ತು ಅತಿ ದೊಡ್ದ ವಿಮಾನ ನಿಲ್ದಾಣವಾಗಿದೆ.
ವಿಮಾನ ನಿಲ್ದಾಣದಿಂದ ಬೆಂಗಳೂರು ನಗರಕ್ಕೆ ಸಂಚಾರ ಮಾಡಲು BMTC ಮತ್ತು ವಾಯುವಜ್ರದ ಎಲೆಕ್ಟ್ರಿಕ್ ಬಸ್ ಗಳ ಸೇವೆಯನ್ನು ಕಲ್ಪಿಸಿದ್ದು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಸ್ ಗಳನ್ನು ನೀಡಲು ಸಚಿವರು ಒಪ್ಪಿಗೆ ಯನ್ನು ನೀಡಿದರು.
ದೇವನಹಳ್ಳಿ ತಾಲ್ಲೂಕಿನ ತೂಬಗೆರೆ ಪಂಚಾಯತಿಗೆ ಬಸ್ ಗಳು ಅನಾನುಕೂಲ ಇರುವುದರಿಂದ ಅಲ್ಲಿಗೆ ಸಂಪರ್ಕ ಕಲ್ಪಿಸಲು ಸಾರಿಗೆ ಸಚಿವರಿಗೆ ಮನವಿಯನ್ನು ನೀಡಲಾಯಿತು.
ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್ಎಸ್ ಘಾಟಿ ಸುಬ್ರಮಣ್ಯ ದೇವಸ್ಥಾನ ಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಭಕ್ತಾದಿಗಳು ಬರುವುದರಿಂದ ಬಸ್ ವ್ಯವಸ್ಥೆಗಳು ಹಾಗೂ ಅನ್ನ ದಾಸೋಹ ಭವನವನ್ನು ನಿರ್ಮಾಣ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವರಿಗೆ ಮನವಿಯನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ವ್ಯವಸ್ಥಾಪಕ ನಿರ್ದೇಶಕರಾದ ಸತ್ಯವತಿ, ಮುಖ್ಯ ಕಾರ್ಯನಿರ್ವಾಹಕ ಸತ್ಯಕಿರಘುನಾಥ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ್.ಎನ್ ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿ, ಹಾಗೂ ಸಾರಿಗೆ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…