Categories: ರಾಜ್ಯ

BPL ಕಾರ್ಡ್ ಹೊಂದಿದವರ ಆರ್ಥಿಕ ಸ್ಥಿತಿಗಳ ‌ಬಗ್ಗೆ ಸರ್ವೇ

BPL ಕಾರ್ಡ್ ಹೊಂದಿ ಉಚಿತ ಅನ್ನಭಾಗ್ಯ ಸೌಲಭ್ಯ ಪಡೆಯುತ್ತಿರುವವರಿಗೆ ಸರ್ಕಾರ ಶಾಕ್ ನೀಡಿದೆ. ಆಹಾರ ಇಲಾಖೆಯಿಂದ ಅರ್ಹತೆ ಇಲ್ಲದಿದ್ದರೂ BPL ಕಾರ್ಡ್ ಹೊಂದಿದವರ ಆರ್ಥಿಕ ಸ್ಥಿತಿಗಳ ‌ಬಗ್ಗೆ ಸರ್ವೇ ಕಾರ್ಯ ನಡೆಸಲಾಗುತ್ತಿದೆ.

ಸದ್ಯ ರಾಜ್ಯದಲ್ಲಿ 1 ಕೋಟಿ 28 ಲಕ್ಷ ಮಂದಿ BPL ಕಾರ್ಡ್ ಹೊಂದಿದ್ದು, ಅನ್ನಭಾಗ್ಯದ ಫಲಾನುಭವಿಗಳಾಗಿದ್ದಾರೆ. ಸರ್ವೇ ಮಾಡಿದರೆ ರಾಜ್ಯದಲ್ಲಿ ಸುಮಾರು 35 ಲಕ್ಷಕ್ಕೂ ಹೆಚ್ಚಿನ ಮಂದಿಯ BPL ಕಾರ್ಡ್ ರದ್ದು ಸಾಧ್ಯತೆ ಇದೆ ಎಂದು ಆಹಾರ ಇಲಾಖೆ ಎಂಡಿ ಗ್ಯಾನೇಂದ್ರ ಮಾಹಿತಿ ನೀಡಿದ್ದಾರೆ.

ವೈಟ್ ಬೋರ್ಡ್ ಕಾರು, ನಿಗದಿತ ವಾರ್ಷಿಕ ಆದಾಯ, ಸರ್ಕಾರಿ ನೌಕರರು, ನಿಗದಿತ ಜಮೀನು ಹೀಗೆ ಒಟ್ಟು 6 ಮಾನದಂಡಗಳ ಆಧಾರದ ಮೇಲೆ ಸರ್ವೇ ನಡೆಸಲಾಗುತ್ತಿದೆ.

ಈಗಾಗಲೇ ಸರ್ವೇ ನಡೆಸಿ 35ಸಾವಿರಕ್ಕೂ ಅಧಿಕ BPL ಕಾರ್ಡ್ ರದ್ದು, ಸಾವನ್ನಪ್ಪಿರುವ ಸುಮಾರು 4.55 ಲಕ್ಷ ಜನರ ಹೆಸರನ್ನ ಅಳಿಸಿದ ಆಹಾರ ಇಲಾಖೆ.

ರದ್ದು ಮಾಡುವುದುರ ಜೊತೆಗೆ ಮಾನದಂಡ ಉಲ್ಲಂಘಿಸಿದವರಿಂದ 8 ಕೋಟಿಗೂ ಅಧಿಕ ದಂಡ ವಸೂಲಿ ಸಹ ಮಾಡಲಾಗಿದೆ. ಸಾವನ್ನಪ್ಪಿದರ ಹೆಸರನ್ನ‌ ಅಳಿಸಿರುವುದರಿಂದ ಸರ್ಕಾರಕ್ಕೆ ತಿಂಗಳಿಗೆ 6ರಿಂದ 7 ಕೋಟಿ ಉಳಿತಾಯವಾಗಿದೆ.

ಅನಧಿಕೃತವಾಗಿ BPL ಕಾರ್ಡ್ ಹೊಂದಿರುವವರ ಪೈಕಿ ಸರ್ಕಾರಿ ನೌಕರರು & ವೈಟ್ ಬೋರ್ಡ್ ಕಾರು ಇರುವವರೇ ಹೆಚ್ಚಾಗಿದ್ದಾರೆ. RTO ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟು 44,62,107 ವೈಟ್ ಬೋರ್ಡ್ ಕಾರುಗಳಿವೆ ಎಂದು ಆಹಾರ ಇಲಾಖೆ ಎಂಡಿ ಗ್ಯಾನೇಂದ್ರ ಮಾಹಿತಿ ನೀಡಿದ್ದಾರೆ.

BPL ಕಾರ್ಡ್ ಮಾನದಂಡ ಏನು.!?

• ವಾರ್ಷಿಕ ಆದಾಯ 1.2 ಲಕ್ಷ ಮೀರಬಾರದು
• 3 ಹೆಕ್ಟರ್‌ಗಿಂತ ಹೆಚ್ಚಿನ ಒಣಭೂಮಿ ಹೊಂದಿರಬಾರದು
• ವೈಟ್ ಬೋರ್ಡ್ ನಾಲ್ಕು ಚಕ್ರದ ವಾಹನ ಇರಬಾರದು
• ಯಾವುದೇ ಸರ್ಕಾರಿ ನೌಕರರಾಗಿರಬಾರದು
• ನಗರದ ಭಾಗದಲ್ಲಿ ಮನೆಯ ವಿಸ್ತೀರ್ಣ 1000 sqt ಮೀರಬಾರದು
• ವಾಣಿಜ್ಯ ತೆರಿಗೆ, ಆದಾಯ ತೆರಿಗೆ, IT ರಿಟರ್ನ್ಸ್ ಪಾವತಿದಾರರು

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

5 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

6 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

13 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

13 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

19 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago