Categories: ರಾಜ್ಯ

BPL ಕಾರ್ಡ್ ಹೊಂದಿದವರ ಆರ್ಥಿಕ ಸ್ಥಿತಿಗಳ ‌ಬಗ್ಗೆ ಸರ್ವೇ

BPL ಕಾರ್ಡ್ ಹೊಂದಿ ಉಚಿತ ಅನ್ನಭಾಗ್ಯ ಸೌಲಭ್ಯ ಪಡೆಯುತ್ತಿರುವವರಿಗೆ ಸರ್ಕಾರ ಶಾಕ್ ನೀಡಿದೆ. ಆಹಾರ ಇಲಾಖೆಯಿಂದ ಅರ್ಹತೆ ಇಲ್ಲದಿದ್ದರೂ BPL ಕಾರ್ಡ್ ಹೊಂದಿದವರ ಆರ್ಥಿಕ ಸ್ಥಿತಿಗಳ ‌ಬಗ್ಗೆ ಸರ್ವೇ ಕಾರ್ಯ ನಡೆಸಲಾಗುತ್ತಿದೆ.

ಸದ್ಯ ರಾಜ್ಯದಲ್ಲಿ 1 ಕೋಟಿ 28 ಲಕ್ಷ ಮಂದಿ BPL ಕಾರ್ಡ್ ಹೊಂದಿದ್ದು, ಅನ್ನಭಾಗ್ಯದ ಫಲಾನುಭವಿಗಳಾಗಿದ್ದಾರೆ. ಸರ್ವೇ ಮಾಡಿದರೆ ರಾಜ್ಯದಲ್ಲಿ ಸುಮಾರು 35 ಲಕ್ಷಕ್ಕೂ ಹೆಚ್ಚಿನ ಮಂದಿಯ BPL ಕಾರ್ಡ್ ರದ್ದು ಸಾಧ್ಯತೆ ಇದೆ ಎಂದು ಆಹಾರ ಇಲಾಖೆ ಎಂಡಿ ಗ್ಯಾನೇಂದ್ರ ಮಾಹಿತಿ ನೀಡಿದ್ದಾರೆ.

ವೈಟ್ ಬೋರ್ಡ್ ಕಾರು, ನಿಗದಿತ ವಾರ್ಷಿಕ ಆದಾಯ, ಸರ್ಕಾರಿ ನೌಕರರು, ನಿಗದಿತ ಜಮೀನು ಹೀಗೆ ಒಟ್ಟು 6 ಮಾನದಂಡಗಳ ಆಧಾರದ ಮೇಲೆ ಸರ್ವೇ ನಡೆಸಲಾಗುತ್ತಿದೆ.

ಈಗಾಗಲೇ ಸರ್ವೇ ನಡೆಸಿ 35ಸಾವಿರಕ್ಕೂ ಅಧಿಕ BPL ಕಾರ್ಡ್ ರದ್ದು, ಸಾವನ್ನಪ್ಪಿರುವ ಸುಮಾರು 4.55 ಲಕ್ಷ ಜನರ ಹೆಸರನ್ನ ಅಳಿಸಿದ ಆಹಾರ ಇಲಾಖೆ.

ರದ್ದು ಮಾಡುವುದುರ ಜೊತೆಗೆ ಮಾನದಂಡ ಉಲ್ಲಂಘಿಸಿದವರಿಂದ 8 ಕೋಟಿಗೂ ಅಧಿಕ ದಂಡ ವಸೂಲಿ ಸಹ ಮಾಡಲಾಗಿದೆ. ಸಾವನ್ನಪ್ಪಿದರ ಹೆಸರನ್ನ‌ ಅಳಿಸಿರುವುದರಿಂದ ಸರ್ಕಾರಕ್ಕೆ ತಿಂಗಳಿಗೆ 6ರಿಂದ 7 ಕೋಟಿ ಉಳಿತಾಯವಾಗಿದೆ.

ಅನಧಿಕೃತವಾಗಿ BPL ಕಾರ್ಡ್ ಹೊಂದಿರುವವರ ಪೈಕಿ ಸರ್ಕಾರಿ ನೌಕರರು & ವೈಟ್ ಬೋರ್ಡ್ ಕಾರು ಇರುವವರೇ ಹೆಚ್ಚಾಗಿದ್ದಾರೆ. RTO ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟು 44,62,107 ವೈಟ್ ಬೋರ್ಡ್ ಕಾರುಗಳಿವೆ ಎಂದು ಆಹಾರ ಇಲಾಖೆ ಎಂಡಿ ಗ್ಯಾನೇಂದ್ರ ಮಾಹಿತಿ ನೀಡಿದ್ದಾರೆ.

BPL ಕಾರ್ಡ್ ಮಾನದಂಡ ಏನು.!?

• ವಾರ್ಷಿಕ ಆದಾಯ 1.2 ಲಕ್ಷ ಮೀರಬಾರದು
• 3 ಹೆಕ್ಟರ್‌ಗಿಂತ ಹೆಚ್ಚಿನ ಒಣಭೂಮಿ ಹೊಂದಿರಬಾರದು
• ವೈಟ್ ಬೋರ್ಡ್ ನಾಲ್ಕು ಚಕ್ರದ ವಾಹನ ಇರಬಾರದು
• ಯಾವುದೇ ಸರ್ಕಾರಿ ನೌಕರರಾಗಿರಬಾರದು
• ನಗರದ ಭಾಗದಲ್ಲಿ ಮನೆಯ ವಿಸ್ತೀರ್ಣ 1000 sqt ಮೀರಬಾರದು
• ವಾಣಿಜ್ಯ ತೆರಿಗೆ, ಆದಾಯ ತೆರಿಗೆ, IT ರಿಟರ್ನ್ಸ್ ಪಾವತಿದಾರರು

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

3 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

15 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

15 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

16 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

19 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago