Categories: ರಾಜ್ಯ

BPL ಕಾರ್ಡ್ ಹೊಂದಿದವರ ಆರ್ಥಿಕ ಸ್ಥಿತಿಗಳ ‌ಬಗ್ಗೆ ಸರ್ವೇ

BPL ಕಾರ್ಡ್ ಹೊಂದಿ ಉಚಿತ ಅನ್ನಭಾಗ್ಯ ಸೌಲಭ್ಯ ಪಡೆಯುತ್ತಿರುವವರಿಗೆ ಸರ್ಕಾರ ಶಾಕ್ ನೀಡಿದೆ. ಆಹಾರ ಇಲಾಖೆಯಿಂದ ಅರ್ಹತೆ ಇಲ್ಲದಿದ್ದರೂ BPL ಕಾರ್ಡ್ ಹೊಂದಿದವರ ಆರ್ಥಿಕ ಸ್ಥಿತಿಗಳ ‌ಬಗ್ಗೆ ಸರ್ವೇ ಕಾರ್ಯ ನಡೆಸಲಾಗುತ್ತಿದೆ.

ಸದ್ಯ ರಾಜ್ಯದಲ್ಲಿ 1 ಕೋಟಿ 28 ಲಕ್ಷ ಮಂದಿ BPL ಕಾರ್ಡ್ ಹೊಂದಿದ್ದು, ಅನ್ನಭಾಗ್ಯದ ಫಲಾನುಭವಿಗಳಾಗಿದ್ದಾರೆ. ಸರ್ವೇ ಮಾಡಿದರೆ ರಾಜ್ಯದಲ್ಲಿ ಸುಮಾರು 35 ಲಕ್ಷಕ್ಕೂ ಹೆಚ್ಚಿನ ಮಂದಿಯ BPL ಕಾರ್ಡ್ ರದ್ದು ಸಾಧ್ಯತೆ ಇದೆ ಎಂದು ಆಹಾರ ಇಲಾಖೆ ಎಂಡಿ ಗ್ಯಾನೇಂದ್ರ ಮಾಹಿತಿ ನೀಡಿದ್ದಾರೆ.

ವೈಟ್ ಬೋರ್ಡ್ ಕಾರು, ನಿಗದಿತ ವಾರ್ಷಿಕ ಆದಾಯ, ಸರ್ಕಾರಿ ನೌಕರರು, ನಿಗದಿತ ಜಮೀನು ಹೀಗೆ ಒಟ್ಟು 6 ಮಾನದಂಡಗಳ ಆಧಾರದ ಮೇಲೆ ಸರ್ವೇ ನಡೆಸಲಾಗುತ್ತಿದೆ.

ಈಗಾಗಲೇ ಸರ್ವೇ ನಡೆಸಿ 35ಸಾವಿರಕ್ಕೂ ಅಧಿಕ BPL ಕಾರ್ಡ್ ರದ್ದು, ಸಾವನ್ನಪ್ಪಿರುವ ಸುಮಾರು 4.55 ಲಕ್ಷ ಜನರ ಹೆಸರನ್ನ ಅಳಿಸಿದ ಆಹಾರ ಇಲಾಖೆ.

ರದ್ದು ಮಾಡುವುದುರ ಜೊತೆಗೆ ಮಾನದಂಡ ಉಲ್ಲಂಘಿಸಿದವರಿಂದ 8 ಕೋಟಿಗೂ ಅಧಿಕ ದಂಡ ವಸೂಲಿ ಸಹ ಮಾಡಲಾಗಿದೆ. ಸಾವನ್ನಪ್ಪಿದರ ಹೆಸರನ್ನ‌ ಅಳಿಸಿರುವುದರಿಂದ ಸರ್ಕಾರಕ್ಕೆ ತಿಂಗಳಿಗೆ 6ರಿಂದ 7 ಕೋಟಿ ಉಳಿತಾಯವಾಗಿದೆ.

ಅನಧಿಕೃತವಾಗಿ BPL ಕಾರ್ಡ್ ಹೊಂದಿರುವವರ ಪೈಕಿ ಸರ್ಕಾರಿ ನೌಕರರು & ವೈಟ್ ಬೋರ್ಡ್ ಕಾರು ಇರುವವರೇ ಹೆಚ್ಚಾಗಿದ್ದಾರೆ. RTO ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟು 44,62,107 ವೈಟ್ ಬೋರ್ಡ್ ಕಾರುಗಳಿವೆ ಎಂದು ಆಹಾರ ಇಲಾಖೆ ಎಂಡಿ ಗ್ಯಾನೇಂದ್ರ ಮಾಹಿತಿ ನೀಡಿದ್ದಾರೆ.

BPL ಕಾರ್ಡ್ ಮಾನದಂಡ ಏನು.!?

• ವಾರ್ಷಿಕ ಆದಾಯ 1.2 ಲಕ್ಷ ಮೀರಬಾರದು
• 3 ಹೆಕ್ಟರ್‌ಗಿಂತ ಹೆಚ್ಚಿನ ಒಣಭೂಮಿ ಹೊಂದಿರಬಾರದು
• ವೈಟ್ ಬೋರ್ಡ್ ನಾಲ್ಕು ಚಕ್ರದ ವಾಹನ ಇರಬಾರದು
• ಯಾವುದೇ ಸರ್ಕಾರಿ ನೌಕರರಾಗಿರಬಾರದು
• ನಗರದ ಭಾಗದಲ್ಲಿ ಮನೆಯ ವಿಸ್ತೀರ್ಣ 1000 sqt ಮೀರಬಾರದು
• ವಾಣಿಜ್ಯ ತೆರಿಗೆ, ಆದಾಯ ತೆರಿಗೆ, IT ರಿಟರ್ನ್ಸ್ ಪಾವತಿದಾರರು

Ramesh Babu

Journalist

Recent Posts

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

1 hour ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

2 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

3 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

7 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

8 hours ago

ಭಾರತದ ಜಾತಿ ವ್ಯವಸ್ಥೆಗೆ ಚಲನೆಯಿಲ್ಲ- ಸಿಎಂ ಸಿದ್ದರಾಮಯ್ಯ

ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…

22 hours ago