BPL ಕಾರ್ಡ್ ಹೊಂದಿ ಉಚಿತ ಅನ್ನಭಾಗ್ಯ ಸೌಲಭ್ಯ ಪಡೆಯುತ್ತಿರುವವರಿಗೆ ಸರ್ಕಾರ ಶಾಕ್ ನೀಡಿದೆ. ಆಹಾರ ಇಲಾಖೆಯಿಂದ ಅರ್ಹತೆ ಇಲ್ಲದಿದ್ದರೂ BPL ಕಾರ್ಡ್ ಹೊಂದಿದವರ ಆರ್ಥಿಕ ಸ್ಥಿತಿಗಳ ಬಗ್ಗೆ ಸರ್ವೇ ಕಾರ್ಯ ನಡೆಸಲಾಗುತ್ತಿದೆ.
ಸದ್ಯ ರಾಜ್ಯದಲ್ಲಿ 1 ಕೋಟಿ 28 ಲಕ್ಷ ಮಂದಿ BPL ಕಾರ್ಡ್ ಹೊಂದಿದ್ದು, ಅನ್ನಭಾಗ್ಯದ ಫಲಾನುಭವಿಗಳಾಗಿದ್ದಾರೆ. ಸರ್ವೇ ಮಾಡಿದರೆ ರಾಜ್ಯದಲ್ಲಿ ಸುಮಾರು 35 ಲಕ್ಷಕ್ಕೂ ಹೆಚ್ಚಿನ ಮಂದಿಯ BPL ಕಾರ್ಡ್ ರದ್ದು ಸಾಧ್ಯತೆ ಇದೆ ಎಂದು ಆಹಾರ ಇಲಾಖೆ ಎಂಡಿ ಗ್ಯಾನೇಂದ್ರ ಮಾಹಿತಿ ನೀಡಿದ್ದಾರೆ.
ವೈಟ್ ಬೋರ್ಡ್ ಕಾರು, ನಿಗದಿತ ವಾರ್ಷಿಕ ಆದಾಯ, ಸರ್ಕಾರಿ ನೌಕರರು, ನಿಗದಿತ ಜಮೀನು ಹೀಗೆ ಒಟ್ಟು 6 ಮಾನದಂಡಗಳ ಆಧಾರದ ಮೇಲೆ ಸರ್ವೇ ನಡೆಸಲಾಗುತ್ತಿದೆ.
ಈಗಾಗಲೇ ಸರ್ವೇ ನಡೆಸಿ 35ಸಾವಿರಕ್ಕೂ ಅಧಿಕ BPL ಕಾರ್ಡ್ ರದ್ದು, ಸಾವನ್ನಪ್ಪಿರುವ ಸುಮಾರು 4.55 ಲಕ್ಷ ಜನರ ಹೆಸರನ್ನ ಅಳಿಸಿದ ಆಹಾರ ಇಲಾಖೆ.
ರದ್ದು ಮಾಡುವುದುರ ಜೊತೆಗೆ ಮಾನದಂಡ ಉಲ್ಲಂಘಿಸಿದವರಿಂದ 8 ಕೋಟಿಗೂ ಅಧಿಕ ದಂಡ ವಸೂಲಿ ಸಹ ಮಾಡಲಾಗಿದೆ. ಸಾವನ್ನಪ್ಪಿದರ ಹೆಸರನ್ನ ಅಳಿಸಿರುವುದರಿಂದ ಸರ್ಕಾರಕ್ಕೆ ತಿಂಗಳಿಗೆ 6ರಿಂದ 7 ಕೋಟಿ ಉಳಿತಾಯವಾಗಿದೆ.
ಅನಧಿಕೃತವಾಗಿ BPL ಕಾರ್ಡ್ ಹೊಂದಿರುವವರ ಪೈಕಿ ಸರ್ಕಾರಿ ನೌಕರರು & ವೈಟ್ ಬೋರ್ಡ್ ಕಾರು ಇರುವವರೇ ಹೆಚ್ಚಾಗಿದ್ದಾರೆ. RTO ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟು 44,62,107 ವೈಟ್ ಬೋರ್ಡ್ ಕಾರುಗಳಿವೆ ಎಂದು ಆಹಾರ ಇಲಾಖೆ ಎಂಡಿ ಗ್ಯಾನೇಂದ್ರ ಮಾಹಿತಿ ನೀಡಿದ್ದಾರೆ.
BPL ಕಾರ್ಡ್ ಮಾನದಂಡ ಏನು.!?
• ವಾರ್ಷಿಕ ಆದಾಯ 1.2 ಲಕ್ಷ ಮೀರಬಾರದು
• 3 ಹೆಕ್ಟರ್ಗಿಂತ ಹೆಚ್ಚಿನ ಒಣಭೂಮಿ ಹೊಂದಿರಬಾರದು
• ವೈಟ್ ಬೋರ್ಡ್ ನಾಲ್ಕು ಚಕ್ರದ ವಾಹನ ಇರಬಾರದು
• ಯಾವುದೇ ಸರ್ಕಾರಿ ನೌಕರರಾಗಿರಬಾರದು
• ನಗರದ ಭಾಗದಲ್ಲಿ ಮನೆಯ ವಿಸ್ತೀರ್ಣ 1000 sqt ಮೀರಬಾರದು
• ವಾಣಿಜ್ಯ ತೆರಿಗೆ, ಆದಾಯ ತೆರಿಗೆ, IT ರಿಟರ್ನ್ಸ್ ಪಾವತಿದಾರರು
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…