Categories: ಕೊಡಗು

Crime Update: ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಮೀನಾ ಹತ್ಯೆ ಪ್ರಕರಣ: ಬಾಲಕಿಯನ್ನು ಕೊಂದ ಆರೋಪಿ ಮೊಣ್ಣಂಡ ಪ್ರಕಾಶ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಆರೋಪಿ ಮೃತ ದೇಹ ಪತ್ತೆಯಾದರು ಮೀನಾಳ ರುಂಡ ಪತ್ತೆಯಾಗಿಲ್ಲ: ನಿಗೂಢವಾಗಿ ಉಳಿದ ಮೀನಾಳ ಹತ್ಯೆ ಪ್ರಕರಣ

ಅಪ್ರಾಪ್ತ ಬಾಲಕಿಯ ಹತ್ಯೆ ಪ್ರಕರಣದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಬಾಲಕಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಪ್ರಕಾಶ್ ನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಮ್ಮಿಯಾಲದಲ್ಲಿರುವ ತನ್ನ ಮನೆಯ ಸಮೀಪದಲ್ಲೆ ನೇಣಿಗೆ ಶರಣಾಗಿದ್ದಾನೆ.

ಆದರೆ, ಪ್ರಕಾಶ್ ತೆಗೆದುಕೊಂಡು ಹೋಗಿದ್ದ ಬಾಲಕಿಯ ರುಂಡ ಮಾತ್ರ ಪತ್ತೆಯಾಗಿಲ್ಲ. ಸದ್ಯ ಬಾಲಕಿಯ ರುಂಡ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಕೊಲೆಯ ಹಿಂದಿನ ಮರ್ಮವನ್ನು ಈತನೊಂದಿಗೆ ಜೀಪಿನಲ್ಲಿ ತೆರಳಿದ ಎನ್ನಲಾದ ಸಹಚಾರನಿಂದ ಮಾತ್ರ ತಿಳಿಯಬಹುದಾಗಿದೆ. ಆತನನ್ನು ಬಂದಿಸಿದಾಗ ಮಾತ್ರ  ಕೊಲೆಗೆ ಕಾರಣ ತಿಳಿಯಬಹುದಾಗಿದೆ.

ನಿನ್ನೆ ಕೊಡಗಿನ ಸೂರ್ಲಬ್ಬಿಯಲ್ಲಿ ನಡೆದ ವಿದ್ಯಾರ್ಥಿನಿ ಮೀನಾ ಎಂಬುವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಣ್ಣಂಡ ಪ್ರಕಾಶ್ ಎಂದು ಹೇಳಲಾಗಿತ್ತು.

ನಿನ್ನೆ 32 ವರ್ಷ ಪ್ರಾಯದ ಮೊಣ್ಣಂಡ ಪ್ರಕಾಶ ಹಾಗೂ ಮೀನಾ ಅವರ ನಡುವೆ ಮದುವೆಯ ನಿಶ್ಚಿತಾರ್ಥ ಕಾರ್ಯ ನಡೆಯುವ ಸಂಬಂಧವಾಗಿ ಎಲ್ಲರೂ ಸೇರ್ಪಡಿಗೊಂಡಿದ್ದರು.

ಈ ಬಗ್ಗೆ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಹಾಯ ವಾಣಿಗೆ ದೂರು ಬಂದ ಅನ್ವಯ ಸಮಾಜ ಕಲ್ಯಾಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಲಹೆ ಹಾಗೂ ಅರಿವು ಮೂಡಿಸಿ ಆಕೆಗೆ 18 ತುಂಬಿದ ನಂತರ ಮದುವೆ ಮಾಡಿಸುವಂತೆ ಸೂಚನೆ ನೀಡಿದರು.

ಈ ಸೂಚನೆಗೆ ಉಭಯ ಕಡೆಗಳು ಒಪ್ಪಿಕೊಂಡಿದ್ದರು. ಆದರೆ, ಸಂಜೆ 5.30 ರ ಸಮಯದಲ್ಲಿ ಪ್ರಕಾಶ್ ಆಕೆ ಮನೆಗೆ ತೆರಳಿ ಏಕಾಏಕಿ ತಂದೆ ಹಾಗೂ ತಾಯಿಗೆ ಹೊಡೆದು ಗಾಯಗೊಳಿಸಿ ಮೀನಳನ್ನು ಧರಧರನೇ 100 ಮೀಟರ್ ಎಳೆದೊಯ್ದು, ಆಕೆಯ ತಲೆಯನ್ನು ಕಡಿದು ತಲೆಯ ಭಾಗ ಸಹಿತ ತೆಗೆದುಕೊಂಡು ಪರಾರಿಯಾಗಿದ್ದನು ಎನ್ನಲಾಗಿತ್ತು.

ಆರೋಪಿ ಪ್ರಕಾಶ್ ನನ್ನು ಹೆಡೆಮುರಿ ಕಟ್ಟಲು ಪೊಲೀಸರು ಮುಂದಾಗಿದ್ದರು. ಆದರೆ ಪ್ರಕಾಶ್ ನೇಣಿಗೆ ಶರಣಾಗಿದ್ದಾನೆ. ಆರೋಪಿ ಪ್ರಕಾಶ್ ಜತೆಗೆ ಮತ್ತೋವ೯ನಿದ್ದ – ಆತ ಮತ್ತು ಪ್ರಕಾಶ್ ಬಳಸಿದ್ದ ವಾಹನದ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

6 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

7 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

19 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

22 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

23 hours ago