ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಮ್ಮಿಯಾಲದಲ್ಲಿರುವ ತನ್ನ ಮನೆಯ ಸಮೀಪದಲ್ಲೆ ನೇಣಿಗೆ ಶರಣಾಗಿದ್ದಾನೆ.
ಆದರೆ, ಪ್ರಕಾಶ್ ತೆಗೆದುಕೊಂಡು ಹೋಗಿದ್ದ ಬಾಲಕಿಯ ರುಂಡ ಮಾತ್ರ ಪತ್ತೆಯಾಗಿಲ್ಲ. ಸದ್ಯ ಬಾಲಕಿಯ ರುಂಡ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.
ಕೊಲೆಯ ಹಿಂದಿನ ಮರ್ಮವನ್ನು ಈತನೊಂದಿಗೆ ಜೀಪಿನಲ್ಲಿ ತೆರಳಿದ ಎನ್ನಲಾದ ಸಹಚಾರನಿಂದ ಮಾತ್ರ ತಿಳಿಯಬಹುದಾಗಿದೆ. ಆತನನ್ನು ಬಂದಿಸಿದಾಗ ಮಾತ್ರ ಕೊಲೆಗೆ ಕಾರಣ ತಿಳಿಯಬಹುದಾಗಿದೆ.
ನಿನ್ನೆ ಕೊಡಗಿನ ಸೂರ್ಲಬ್ಬಿಯಲ್ಲಿ ನಡೆದ ವಿದ್ಯಾರ್ಥಿನಿ ಮೀನಾ ಎಂಬುವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಣ್ಣಂಡ ಪ್ರಕಾಶ್ ಎಂದು ಹೇಳಲಾಗಿತ್ತು.
ನಿನ್ನೆ 32 ವರ್ಷ ಪ್ರಾಯದ ಮೊಣ್ಣಂಡ ಪ್ರಕಾಶ ಹಾಗೂ ಮೀನಾ ಅವರ ನಡುವೆ ಮದುವೆಯ ನಿಶ್ಚಿತಾರ್ಥ ಕಾರ್ಯ ನಡೆಯುವ ಸಂಬಂಧವಾಗಿ ಎಲ್ಲರೂ ಸೇರ್ಪಡಿಗೊಂಡಿದ್ದರು.
ಈ ಬಗ್ಗೆ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಹಾಯ ವಾಣಿಗೆ ದೂರು ಬಂದ ಅನ್ವಯ ಸಮಾಜ ಕಲ್ಯಾಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಲಹೆ ಹಾಗೂ ಅರಿವು ಮೂಡಿಸಿ ಆಕೆಗೆ 18 ತುಂಬಿದ ನಂತರ ಮದುವೆ ಮಾಡಿಸುವಂತೆ ಸೂಚನೆ ನೀಡಿದರು.
ಈ ಸೂಚನೆಗೆ ಉಭಯ ಕಡೆಗಳು ಒಪ್ಪಿಕೊಂಡಿದ್ದರು. ಆದರೆ, ಸಂಜೆ 5.30 ರ ಸಮಯದಲ್ಲಿ ಪ್ರಕಾಶ್ ಆಕೆ ಮನೆಗೆ ತೆರಳಿ ಏಕಾಏಕಿ ತಂದೆ ಹಾಗೂ ತಾಯಿಗೆ ಹೊಡೆದು ಗಾಯಗೊಳಿಸಿ ಮೀನಳನ್ನು ಧರಧರನೇ 100 ಮೀಟರ್ ಎಳೆದೊಯ್ದು, ಆಕೆಯ ತಲೆಯನ್ನು ಕಡಿದು ತಲೆಯ ಭಾಗ ಸಹಿತ ತೆಗೆದುಕೊಂಡು ಪರಾರಿಯಾಗಿದ್ದನು ಎನ್ನಲಾಗಿತ್ತು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…