Categories: ಕೊಡಗು

Crime Update: ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಮೀನಾ ಹತ್ಯೆ ಪ್ರಕರಣ: ಬಾಲಕಿಯನ್ನು ಕೊಂದ ಆರೋಪಿ ಮೊಣ್ಣಂಡ ಪ್ರಕಾಶ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಆರೋಪಿ ಮೃತ ದೇಹ ಪತ್ತೆಯಾದರು ಮೀನಾಳ ರುಂಡ ಪತ್ತೆಯಾಗಿಲ್ಲ: ನಿಗೂಢವಾಗಿ ಉಳಿದ ಮೀನಾಳ ಹತ್ಯೆ ಪ್ರಕರಣ

ಅಪ್ರಾಪ್ತ ಬಾಲಕಿಯ ಹತ್ಯೆ ಪ್ರಕರಣದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಬಾಲಕಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಪ್ರಕಾಶ್ ನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಮ್ಮಿಯಾಲದಲ್ಲಿರುವ ತನ್ನ ಮನೆಯ ಸಮೀಪದಲ್ಲೆ ನೇಣಿಗೆ ಶರಣಾಗಿದ್ದಾನೆ.

ಆದರೆ, ಪ್ರಕಾಶ್ ತೆಗೆದುಕೊಂಡು ಹೋಗಿದ್ದ ಬಾಲಕಿಯ ರುಂಡ ಮಾತ್ರ ಪತ್ತೆಯಾಗಿಲ್ಲ. ಸದ್ಯ ಬಾಲಕಿಯ ರುಂಡ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಕೊಲೆಯ ಹಿಂದಿನ ಮರ್ಮವನ್ನು ಈತನೊಂದಿಗೆ ಜೀಪಿನಲ್ಲಿ ತೆರಳಿದ ಎನ್ನಲಾದ ಸಹಚಾರನಿಂದ ಮಾತ್ರ ತಿಳಿಯಬಹುದಾಗಿದೆ. ಆತನನ್ನು ಬಂದಿಸಿದಾಗ ಮಾತ್ರ  ಕೊಲೆಗೆ ಕಾರಣ ತಿಳಿಯಬಹುದಾಗಿದೆ.

ನಿನ್ನೆ ಕೊಡಗಿನ ಸೂರ್ಲಬ್ಬಿಯಲ್ಲಿ ನಡೆದ ವಿದ್ಯಾರ್ಥಿನಿ ಮೀನಾ ಎಂಬುವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಣ್ಣಂಡ ಪ್ರಕಾಶ್ ಎಂದು ಹೇಳಲಾಗಿತ್ತು.

ನಿನ್ನೆ 32 ವರ್ಷ ಪ್ರಾಯದ ಮೊಣ್ಣಂಡ ಪ್ರಕಾಶ ಹಾಗೂ ಮೀನಾ ಅವರ ನಡುವೆ ಮದುವೆಯ ನಿಶ್ಚಿತಾರ್ಥ ಕಾರ್ಯ ನಡೆಯುವ ಸಂಬಂಧವಾಗಿ ಎಲ್ಲರೂ ಸೇರ್ಪಡಿಗೊಂಡಿದ್ದರು.

ಈ ಬಗ್ಗೆ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಹಾಯ ವಾಣಿಗೆ ದೂರು ಬಂದ ಅನ್ವಯ ಸಮಾಜ ಕಲ್ಯಾಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಲಹೆ ಹಾಗೂ ಅರಿವು ಮೂಡಿಸಿ ಆಕೆಗೆ 18 ತುಂಬಿದ ನಂತರ ಮದುವೆ ಮಾಡಿಸುವಂತೆ ಸೂಚನೆ ನೀಡಿದರು.

ಈ ಸೂಚನೆಗೆ ಉಭಯ ಕಡೆಗಳು ಒಪ್ಪಿಕೊಂಡಿದ್ದರು. ಆದರೆ, ಸಂಜೆ 5.30 ರ ಸಮಯದಲ್ಲಿ ಪ್ರಕಾಶ್ ಆಕೆ ಮನೆಗೆ ತೆರಳಿ ಏಕಾಏಕಿ ತಂದೆ ಹಾಗೂ ತಾಯಿಗೆ ಹೊಡೆದು ಗಾಯಗೊಳಿಸಿ ಮೀನಳನ್ನು ಧರಧರನೇ 100 ಮೀಟರ್ ಎಳೆದೊಯ್ದು, ಆಕೆಯ ತಲೆಯನ್ನು ಕಡಿದು ತಲೆಯ ಭಾಗ ಸಹಿತ ತೆಗೆದುಕೊಂಡು ಪರಾರಿಯಾಗಿದ್ದನು ಎನ್ನಲಾಗಿತ್ತು.

ಆರೋಪಿ ಪ್ರಕಾಶ್ ನನ್ನು ಹೆಡೆಮುರಿ ಕಟ್ಟಲು ಪೊಲೀಸರು ಮುಂದಾಗಿದ್ದರು. ಆದರೆ ಪ್ರಕಾಶ್ ನೇಣಿಗೆ ಶರಣಾಗಿದ್ದಾನೆ. ಆರೋಪಿ ಪ್ರಕಾಶ್ ಜತೆಗೆ ಮತ್ತೋವ೯ನಿದ್ದ – ಆತ ಮತ್ತು ಪ್ರಕಾಶ್ ಬಳಸಿದ್ದ ವಾಹನದ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

11 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

18 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

18 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago