Categories: ಕೊಡಗು

Crime Update: ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಮೀನಾ ಹತ್ಯೆ ಪ್ರಕರಣ: ಬಾಲಕಿಯನ್ನು ಕೊಂದ ಆರೋಪಿ ಮೊಣ್ಣಂಡ ಪ್ರಕಾಶ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಆರೋಪಿ ಮೃತ ದೇಹ ಪತ್ತೆಯಾದರು ಮೀನಾಳ ರುಂಡ ಪತ್ತೆಯಾಗಿಲ್ಲ: ನಿಗೂಢವಾಗಿ ಉಳಿದ ಮೀನಾಳ ಹತ್ಯೆ ಪ್ರಕರಣ

ಅಪ್ರಾಪ್ತ ಬಾಲಕಿಯ ಹತ್ಯೆ ಪ್ರಕರಣದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಬಾಲಕಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಪ್ರಕಾಶ್ ನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಮ್ಮಿಯಾಲದಲ್ಲಿರುವ ತನ್ನ ಮನೆಯ ಸಮೀಪದಲ್ಲೆ ನೇಣಿಗೆ ಶರಣಾಗಿದ್ದಾನೆ.

ಆದರೆ, ಪ್ರಕಾಶ್ ತೆಗೆದುಕೊಂಡು ಹೋಗಿದ್ದ ಬಾಲಕಿಯ ರುಂಡ ಮಾತ್ರ ಪತ್ತೆಯಾಗಿಲ್ಲ. ಸದ್ಯ ಬಾಲಕಿಯ ರುಂಡ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಕೊಲೆಯ ಹಿಂದಿನ ಮರ್ಮವನ್ನು ಈತನೊಂದಿಗೆ ಜೀಪಿನಲ್ಲಿ ತೆರಳಿದ ಎನ್ನಲಾದ ಸಹಚಾರನಿಂದ ಮಾತ್ರ ತಿಳಿಯಬಹುದಾಗಿದೆ. ಆತನನ್ನು ಬಂದಿಸಿದಾಗ ಮಾತ್ರ  ಕೊಲೆಗೆ ಕಾರಣ ತಿಳಿಯಬಹುದಾಗಿದೆ.

ನಿನ್ನೆ ಕೊಡಗಿನ ಸೂರ್ಲಬ್ಬಿಯಲ್ಲಿ ನಡೆದ ವಿದ್ಯಾರ್ಥಿನಿ ಮೀನಾ ಎಂಬುವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಣ್ಣಂಡ ಪ್ರಕಾಶ್ ಎಂದು ಹೇಳಲಾಗಿತ್ತು.

ನಿನ್ನೆ 32 ವರ್ಷ ಪ್ರಾಯದ ಮೊಣ್ಣಂಡ ಪ್ರಕಾಶ ಹಾಗೂ ಮೀನಾ ಅವರ ನಡುವೆ ಮದುವೆಯ ನಿಶ್ಚಿತಾರ್ಥ ಕಾರ್ಯ ನಡೆಯುವ ಸಂಬಂಧವಾಗಿ ಎಲ್ಲರೂ ಸೇರ್ಪಡಿಗೊಂಡಿದ್ದರು.

ಈ ಬಗ್ಗೆ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಹಾಯ ವಾಣಿಗೆ ದೂರು ಬಂದ ಅನ್ವಯ ಸಮಾಜ ಕಲ್ಯಾಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಲಹೆ ಹಾಗೂ ಅರಿವು ಮೂಡಿಸಿ ಆಕೆಗೆ 18 ತುಂಬಿದ ನಂತರ ಮದುವೆ ಮಾಡಿಸುವಂತೆ ಸೂಚನೆ ನೀಡಿದರು.

ಈ ಸೂಚನೆಗೆ ಉಭಯ ಕಡೆಗಳು ಒಪ್ಪಿಕೊಂಡಿದ್ದರು. ಆದರೆ, ಸಂಜೆ 5.30 ರ ಸಮಯದಲ್ಲಿ ಪ್ರಕಾಶ್ ಆಕೆ ಮನೆಗೆ ತೆರಳಿ ಏಕಾಏಕಿ ತಂದೆ ಹಾಗೂ ತಾಯಿಗೆ ಹೊಡೆದು ಗಾಯಗೊಳಿಸಿ ಮೀನಳನ್ನು ಧರಧರನೇ 100 ಮೀಟರ್ ಎಳೆದೊಯ್ದು, ಆಕೆಯ ತಲೆಯನ್ನು ಕಡಿದು ತಲೆಯ ಭಾಗ ಸಹಿತ ತೆಗೆದುಕೊಂಡು ಪರಾರಿಯಾಗಿದ್ದನು ಎನ್ನಲಾಗಿತ್ತು.

ಆರೋಪಿ ಪ್ರಕಾಶ್ ನನ್ನು ಹೆಡೆಮುರಿ ಕಟ್ಟಲು ಪೊಲೀಸರು ಮುಂದಾಗಿದ್ದರು. ಆದರೆ ಪ್ರಕಾಶ್ ನೇಣಿಗೆ ಶರಣಾಗಿದ್ದಾನೆ. ಆರೋಪಿ ಪ್ರಕಾಶ್ ಜತೆಗೆ ಮತ್ತೋವ೯ನಿದ್ದ – ಆತ ಮತ್ತು ಪ್ರಕಾಶ್ ಬಳಸಿದ್ದ ವಾಹನದ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ramesh Babu

Journalist

Recent Posts

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

9 minutes ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

28 minutes ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 hour ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

4 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

14 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

1 day ago