Categories: ಕೊಡಗು

Crime Update: ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಮೀನಾ ಹತ್ಯೆ ಪ್ರಕರಣ: ಬಾಲಕಿಯನ್ನು ಕೊಂದ ಆರೋಪಿ ಮೊಣ್ಣಂಡ ಪ್ರಕಾಶ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಆರೋಪಿ ಮೃತ ದೇಹ ಪತ್ತೆಯಾದರು ಮೀನಾಳ ರುಂಡ ಪತ್ತೆಯಾಗಿಲ್ಲ: ನಿಗೂಢವಾಗಿ ಉಳಿದ ಮೀನಾಳ ಹತ್ಯೆ ಪ್ರಕರಣ

ಅಪ್ರಾಪ್ತ ಬಾಲಕಿಯ ಹತ್ಯೆ ಪ್ರಕರಣದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಬಾಲಕಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಪ್ರಕಾಶ್ ನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಮ್ಮಿಯಾಲದಲ್ಲಿರುವ ತನ್ನ ಮನೆಯ ಸಮೀಪದಲ್ಲೆ ನೇಣಿಗೆ ಶರಣಾಗಿದ್ದಾನೆ.

ಆದರೆ, ಪ್ರಕಾಶ್ ತೆಗೆದುಕೊಂಡು ಹೋಗಿದ್ದ ಬಾಲಕಿಯ ರುಂಡ ಮಾತ್ರ ಪತ್ತೆಯಾಗಿಲ್ಲ. ಸದ್ಯ ಬಾಲಕಿಯ ರುಂಡ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಕೊಲೆಯ ಹಿಂದಿನ ಮರ್ಮವನ್ನು ಈತನೊಂದಿಗೆ ಜೀಪಿನಲ್ಲಿ ತೆರಳಿದ ಎನ್ನಲಾದ ಸಹಚಾರನಿಂದ ಮಾತ್ರ ತಿಳಿಯಬಹುದಾಗಿದೆ. ಆತನನ್ನು ಬಂದಿಸಿದಾಗ ಮಾತ್ರ  ಕೊಲೆಗೆ ಕಾರಣ ತಿಳಿಯಬಹುದಾಗಿದೆ.

ನಿನ್ನೆ ಕೊಡಗಿನ ಸೂರ್ಲಬ್ಬಿಯಲ್ಲಿ ನಡೆದ ವಿದ್ಯಾರ್ಥಿನಿ ಮೀನಾ ಎಂಬುವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಣ್ಣಂಡ ಪ್ರಕಾಶ್ ಎಂದು ಹೇಳಲಾಗಿತ್ತು.

ನಿನ್ನೆ 32 ವರ್ಷ ಪ್ರಾಯದ ಮೊಣ್ಣಂಡ ಪ್ರಕಾಶ ಹಾಗೂ ಮೀನಾ ಅವರ ನಡುವೆ ಮದುವೆಯ ನಿಶ್ಚಿತಾರ್ಥ ಕಾರ್ಯ ನಡೆಯುವ ಸಂಬಂಧವಾಗಿ ಎಲ್ಲರೂ ಸೇರ್ಪಡಿಗೊಂಡಿದ್ದರು.

ಈ ಬಗ್ಗೆ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಹಾಯ ವಾಣಿಗೆ ದೂರು ಬಂದ ಅನ್ವಯ ಸಮಾಜ ಕಲ್ಯಾಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಲಹೆ ಹಾಗೂ ಅರಿವು ಮೂಡಿಸಿ ಆಕೆಗೆ 18 ತುಂಬಿದ ನಂತರ ಮದುವೆ ಮಾಡಿಸುವಂತೆ ಸೂಚನೆ ನೀಡಿದರು.

ಈ ಸೂಚನೆಗೆ ಉಭಯ ಕಡೆಗಳು ಒಪ್ಪಿಕೊಂಡಿದ್ದರು. ಆದರೆ, ಸಂಜೆ 5.30 ರ ಸಮಯದಲ್ಲಿ ಪ್ರಕಾಶ್ ಆಕೆ ಮನೆಗೆ ತೆರಳಿ ಏಕಾಏಕಿ ತಂದೆ ಹಾಗೂ ತಾಯಿಗೆ ಹೊಡೆದು ಗಾಯಗೊಳಿಸಿ ಮೀನಳನ್ನು ಧರಧರನೇ 100 ಮೀಟರ್ ಎಳೆದೊಯ್ದು, ಆಕೆಯ ತಲೆಯನ್ನು ಕಡಿದು ತಲೆಯ ಭಾಗ ಸಹಿತ ತೆಗೆದುಕೊಂಡು ಪರಾರಿಯಾಗಿದ್ದನು ಎನ್ನಲಾಗಿತ್ತು.

ಆರೋಪಿ ಪ್ರಕಾಶ್ ನನ್ನು ಹೆಡೆಮುರಿ ಕಟ್ಟಲು ಪೊಲೀಸರು ಮುಂದಾಗಿದ್ದರು. ಆದರೆ ಪ್ರಕಾಶ್ ನೇಣಿಗೆ ಶರಣಾಗಿದ್ದಾನೆ. ಆರೋಪಿ ಪ್ರಕಾಶ್ ಜತೆಗೆ ಮತ್ತೋವ೯ನಿದ್ದ – ಆತ ಮತ್ತು ಪ್ರಕಾಶ್ ಬಳಸಿದ್ದ ವಾಹನದ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

7 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

20 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

24 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

1 day ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago