ನಿನ್ನೆ ಕೊಡಗಿನ ಸೂರ್ಲಬ್ಬಿಯಲ್ಲಿ ನಡೆದ ವಿದ್ಯಾರ್ಥಿನಿ ಮೀನಾ ಎಂಬುವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಣ್ಣಂಡ ಪ್ರಕಾಶ್ ಎಂದು ಹೇಳಲಾಗಿದೆ.
ಮೀನಾ ಎಸ್ ಎಲ್ ಸಿಯಲ್ಲಿ ನಿನ್ನೆ ಹೊರ ಬಿದ್ದ ಫಲಿತಾಂಶದಲ್ಲಿ ತೇರ್ಗಡೆ ಹೊಂದಿದಳು. ಇಲ್ಲಿನ ನಿವಾಸಿಯಾದ ಸುಬ್ರಮಣಿ ಎಂಬುವರ ಪುತ್ರಿಯಾದ ಈಕೆಗೆ ಮೂವರು ಅಕ್ಕಂದಿಯರು ಹಾಗೂ ಇಬ್ಬರು ಅಣ್ಣಂದಿರಿದ್ದು, ಈಕೆ ಕೊನೆವಳಾಗಿದ್ದಾಳೆ.
ನಿನ್ನೆ 32 ವರ್ಷ ಪ್ರಾಯದ ಮೊಣ್ಣಂಡ ಪ್ರಕಾಶ ಹಾಗೂ ಮೀನಾ ಅವರ ನಡುವೆ ಮದುವೆಯ ನಿಶ್ಚಿತಾರ್ಥ ಕಾರ್ಯ ನಡೆಯುವ ಸಂಬಂಧವಾಗಿ ಎಲ್ಲರೂ ಸೇರ್ಪಡಿಗೊಂಡಿದ್ದರು.
ಈ ಬಗ್ಗೆ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಹಾಯ ವಾಣಿಗೆ ದೂರು ಬಂದ ಅನ್ವಯ ಸಮಾಜ ಕಲ್ಯಾಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಲಹೆ ಹಾಗೂ ಅರಿವು ಮೂಡಿಸಿ ಆಕೆಗೆ 18 ತುಂಬಿದ ನಂತರ ಮದುವೆ ಮಾಡಿಸುವಂತೆ ಸೂಚನೆ ನೀಡಿದರು.
ಈ ಸೂಚನೆಗೆ ಉಭಯ ಕಡೆಗಳು ಒಪ್ಪಿಕೊಂಡಿದ್ದರು. ಆದರೆ, ಸಂಜೆ 5.30 ರ ಸಮಯದಲ್ಲಿ ಪ್ರಕಾಶ್ ಆಕೆ ಮನೆಗೆ ತೆರಳಿ ಏಕಾಏಕಿ ತಂದೆ ಹಾಗೂ ತಾಯಿಗೆ ಹೊಡೆದು ಗಾಯಗೊಳಿಸಿ ಮೀನಳನ್ನು ಧರಧರನೇ 100 ಮೀಟರ್ ಎಳೆದೊಯ್ದು, ಆಕೆಯ ತಲೆಯನ್ನು ಕಡಿದು ತಲೆಯ ಭಾಗ ಸಹಿತ ತೆಗೆದುಕೊಂಡು ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಆತನನ್ನು ಇನ್ನಷ್ಟೇ ಬಂಧಿಸ ಬೇಕಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಹಾಗೂ ಮಡಿಕೇರಿ ಡಿವೈಎಸ್ಪಿ ತಡರಾತ್ರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸತ್ಯಾಸತ್ಯತೆ ಪೊಲೀಸ್ ತನಿಖೆಯಿಂದ ತಿಳಿದುಬರಲಿದೆ.
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…