Categories: Crime

Crime Update: ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಮೀನಾ ಭಯಾನಕ ಕೊಲೆ ಪ್ರಕರಣ: ಆರೋಪಿ ಬಂಧನಕ್ಕೆ ಪೊಲೀಸ್ ಇಲಾಖೆ ಬಿರುಸಿನ ಕಾರ್ಯಾಚರಣೆ: ಕೊಲೆಗೆ ಸಿಕ್ತು ಬಿಗ್ ಟ್ವಿಸ್ಟ್: ಯಾರು, ಏಕೆ‌ ಕೊಲೆ ಮಾಡಲಾಗಿದೆ? ಇಲ್ಲಿದೆ ಸ್ಟೋರಿ ಓದಿ…

ನಿನ್ನೆ ಕೊಡಗಿನ ಸೂರ್ಲಬ್ಬಿಯಲ್ಲಿ ನಡೆದ ವಿದ್ಯಾರ್ಥಿನಿ ಮೀನಾ ಎಂಬುವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಣ್ಣಂಡ ಪ್ರಕಾಶ್ ಎಂದು ಹೇಳಲಾಗಿದೆ.

ಮೀನಾ ಎಸ್ ಎಲ್ ಸಿಯಲ್ಲಿ ನಿನ್ನೆ ಹೊರ ಬಿದ್ದ ಫಲಿತಾಂಶದಲ್ಲಿ ತೇರ್ಗಡೆ  ಹೊಂದಿದಳು. ಇಲ್ಲಿನ ನಿವಾಸಿಯಾದ ಸುಬ್ರಮಣಿ ಎಂಬುವರ ಪುತ್ರಿಯಾದ ಈಕೆಗೆ ಮೂವರು ಅಕ್ಕಂದಿಯರು ಹಾಗೂ ಇಬ್ಬರು ಅಣ್ಣಂದಿರಿದ್ದು, ಈಕೆ ಕೊನೆವಳಾಗಿದ್ದಾಳೆ.

ನಿನ್ನೆ 32 ವರ್ಷ ಪ್ರಾಯದ ಮೊಣ್ಣಂಡ ಪ್ರಕಾಶ ಹಾಗೂ ಮೀನಾ ಅವರ ನಡುವೆ ಮದುವೆಯ ನಿಶ್ಚಿತಾರ್ಥ ಕಾರ್ಯ ನಡೆಯುವ ಸಂಬಂಧವಾಗಿ ಎಲ್ಲರೂ ಸೇರ್ಪಡಿಗೊಂಡಿದ್ದರು.

ಈ ಬಗ್ಗೆ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಹಾಯ ವಾಣಿಗೆ ದೂರು ಬಂದ ಅನ್ವಯ ಸಮಾಜ ಕಲ್ಯಾಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಲಹೆ ಹಾಗೂ ಅರಿವು ಮೂಡಿಸಿ ಆಕೆಗೆ 18 ತುಂಬಿದ ನಂತರ ಮದುವೆ ಮಾಡಿಸುವಂತೆ ಸೂಚನೆ ನೀಡಿದರು.

ಈ ಸೂಚನೆಗೆ ಉಭಯ ಕಡೆಗಳು ಒಪ್ಪಿಕೊಂಡಿದ್ದರು. ಆದರೆ, ಸಂಜೆ 5.30 ರ ಸಮಯದಲ್ಲಿ ಪ್ರಕಾಶ್ ಆಕೆ ಮನೆಗೆ ತೆರಳಿ ಏಕಾಏಕಿ ತಂದೆ ಹಾಗೂ ತಾಯಿಗೆ ಹೊಡೆದು ಗಾಯಗೊಳಿಸಿ ಮೀನಳನ್ನು ಧರಧರನೇ 100 ಮೀಟರ್ ಎಳೆದೊಯ್ದು, ಆಕೆಯ ತಲೆಯನ್ನು ಕಡಿದು ತಲೆಯ ಭಾಗ ಸಹಿತ ತೆಗೆದುಕೊಂಡು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಆತನನ್ನು ಇನ್ನಷ್ಟೇ ಬಂಧಿಸ ಬೇಕಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಹಾಗೂ ಮಡಿಕೇರಿ ಡಿವೈಎಸ್ಪಿ ತಡರಾತ್ರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸತ್ಯಾಸತ್ಯತೆ ಪೊಲೀಸ್ ತನಿಖೆಯಿಂದ ತಿಳಿದುಬರಲಿದೆ.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

4 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

11 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

12 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

1 day ago