Categories: Crime

Crime Update: ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಮೀನಾ ಭಯಾನಕ ಕೊಲೆ ಪ್ರಕರಣ: ಆರೋಪಿ ಬಂಧನಕ್ಕೆ ಪೊಲೀಸ್ ಇಲಾಖೆ ಬಿರುಸಿನ ಕಾರ್ಯಾಚರಣೆ: ಕೊಲೆಗೆ ಸಿಕ್ತು ಬಿಗ್ ಟ್ವಿಸ್ಟ್: ಯಾರು, ಏಕೆ‌ ಕೊಲೆ ಮಾಡಲಾಗಿದೆ? ಇಲ್ಲಿದೆ ಸ್ಟೋರಿ ಓದಿ…

ನಿನ್ನೆ ಕೊಡಗಿನ ಸೂರ್ಲಬ್ಬಿಯಲ್ಲಿ ನಡೆದ ವಿದ್ಯಾರ್ಥಿನಿ ಮೀನಾ ಎಂಬುವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಣ್ಣಂಡ ಪ್ರಕಾಶ್ ಎಂದು ಹೇಳಲಾಗಿದೆ.

ಮೀನಾ ಎಸ್ ಎಲ್ ಸಿಯಲ್ಲಿ ನಿನ್ನೆ ಹೊರ ಬಿದ್ದ ಫಲಿತಾಂಶದಲ್ಲಿ ತೇರ್ಗಡೆ  ಹೊಂದಿದಳು. ಇಲ್ಲಿನ ನಿವಾಸಿಯಾದ ಸುಬ್ರಮಣಿ ಎಂಬುವರ ಪುತ್ರಿಯಾದ ಈಕೆಗೆ ಮೂವರು ಅಕ್ಕಂದಿಯರು ಹಾಗೂ ಇಬ್ಬರು ಅಣ್ಣಂದಿರಿದ್ದು, ಈಕೆ ಕೊನೆವಳಾಗಿದ್ದಾಳೆ.

ನಿನ್ನೆ 32 ವರ್ಷ ಪ್ರಾಯದ ಮೊಣ್ಣಂಡ ಪ್ರಕಾಶ ಹಾಗೂ ಮೀನಾ ಅವರ ನಡುವೆ ಮದುವೆಯ ನಿಶ್ಚಿತಾರ್ಥ ಕಾರ್ಯ ನಡೆಯುವ ಸಂಬಂಧವಾಗಿ ಎಲ್ಲರೂ ಸೇರ್ಪಡಿಗೊಂಡಿದ್ದರು.

ಈ ಬಗ್ಗೆ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಹಾಯ ವಾಣಿಗೆ ದೂರು ಬಂದ ಅನ್ವಯ ಸಮಾಜ ಕಲ್ಯಾಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಲಹೆ ಹಾಗೂ ಅರಿವು ಮೂಡಿಸಿ ಆಕೆಗೆ 18 ತುಂಬಿದ ನಂತರ ಮದುವೆ ಮಾಡಿಸುವಂತೆ ಸೂಚನೆ ನೀಡಿದರು.

ಈ ಸೂಚನೆಗೆ ಉಭಯ ಕಡೆಗಳು ಒಪ್ಪಿಕೊಂಡಿದ್ದರು. ಆದರೆ, ಸಂಜೆ 5.30 ರ ಸಮಯದಲ್ಲಿ ಪ್ರಕಾಶ್ ಆಕೆ ಮನೆಗೆ ತೆರಳಿ ಏಕಾಏಕಿ ತಂದೆ ಹಾಗೂ ತಾಯಿಗೆ ಹೊಡೆದು ಗಾಯಗೊಳಿಸಿ ಮೀನಳನ್ನು ಧರಧರನೇ 100 ಮೀಟರ್ ಎಳೆದೊಯ್ದು, ಆಕೆಯ ತಲೆಯನ್ನು ಕಡಿದು ತಲೆಯ ಭಾಗ ಸಹಿತ ತೆಗೆದುಕೊಂಡು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಆತನನ್ನು ಇನ್ನಷ್ಟೇ ಬಂಧಿಸ ಬೇಕಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಹಾಗೂ ಮಡಿಕೇರಿ ಡಿವೈಎಸ್ಪಿ ತಡರಾತ್ರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸತ್ಯಾಸತ್ಯತೆ ಪೊಲೀಸ್ ತನಿಖೆಯಿಂದ ತಿಳಿದುಬರಲಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

8 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

8 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

8 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

9 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

11 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

15 hours ago