Crime Update: ಹಣದ ವಿಚಾರಕ್ಕೆ ಸ್ನೇಹಿತರಿಂದಲೇ ಕೊಲೆ ಪ್ರಕರಣ: ಮಧುರೆ ಕೆರೆಯಲ್ಲಿ ಅಸ್ಥಿಪಂಜರ ಪತ್ತೆ: ‘ದೃಶ್ಯ’ ಸಿನಿಮಾದ ಮಾದರಿಯಲ್ಲಿ ಹೆಣ ಹೂತಿಟ್ಟು, ಸುಟ್ಟು, ಬೂದಿ ಹಾಗೂ ಮೂಳೆಗಳನ್ನ ಕೆರೆಗೆ ಹಾಕಿದ್ದ ಆರೋಪಿಗಳು

‘ದೃಶ್ಯ’ ಸಿನಿಮಾದ ಮಾದರಿಯಲ್ಲಿ ದೊಡ್ಡಬಳ್ಳಾಪುರದ ಹೊರವಲಯದ ನಾರಾಯಣ್ ಇನ್ಫೋಸಿಟಿಯಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ  ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ಸೋಕೋ ತಂಡದೊಂದಿಗೆ ಶವವನ್ನು ಹೂತಿಟ್ಟ ಸ್ಥಳವನ್ನು ಪರಿಶೀಲನೆ ನಡೆಸಿದ್ದರು.

ಪರಿಶೀಲನೆ ವೇಳೆ ಶವದ ತಲೆ ಕೂದಲು, ಚಪ್ಪಲಿ ಸಿಕ್ಕಿದ್ದು, ಹೆಚ್ಚಿನ ಮಾಹಿತಿಗಾಗಿ ಮಧುರೆ ಕೆರೆಯಲ್ಲಿ ಮೂಳೆಗಳ ಪತ್ತೆಗಾಗಿ ಶೋಧ ಕಾರ್ಯ‌ ನಡೆಸಿದಾಗ ಮೂಳೆಗಳು‌ ಪತ್ತೆಯಾಗಿವೆ.

ಅ.17ರಂದು ಹಣ ಕೊಡುತ್ತೇನೆಂದು ಗೌರಿಬಿದನೂರು ಕಡೆ ಕರೆದುಕೊಂಡು ಹೋಗಿ ಕಾರಲ್ಲಿ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಲ್ಲಲಾಗುತ್ತದೆ. ಕೊಲೆ ಮಾಡಿದ ನಂತರ ಅದೇ ರಾತ್ರಿ ಸುಮಾರು 10ಗಂಟೆ ಸಮಯದಲ್ಲಿ ಈಗಾಗಲೇ ಗುಂಡಿ ತೋಡಿದ್ದ ಸ್ಥಳಕ್ಕೆ ಶವವನ್ನು ತೆಗೆದುಕೊಂಡು ಬಂದು ಗುಂಡಿಯಲ್ಲಿ ಮುಚ್ಚಲಾಗುತ್ತದೆ. ನಂತರ ಅನುಮಾನ ಬರುತ್ತದೆ ಎಂದು ಶವವನ್ನು ಗುಂಡಿಯಿಂದ ತೆಗೆದು ಗ್ಯಾರೇಜ್ ನಿಂದ ಮೆಟಲ್ ಡ್ರಂ ತಂದು ಅದರಲ್ಲಿ ಶವವನ್ನು ಹಾಕಿ ಸುಡಲಾಗುತ್ತದೆ. ಸುಟ್ಟ ನಂತರ ಬೂದಿಯನ್ನು ಹಾಗೂ ಮೂಳೆಗಳನ್ನು ಮಧುರೆ ಕೆರೆಯಲ್ಲಿ ಹಾಕುತ್ತಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ..

ಇದೀಗ ಸುಟ್ಟ ಶವವನ್ನು ಮಧುರೆ ಕೆರೆಗೆ ಹಾಕಲಾಗಿದ್ದ ಅಸ್ಥಿಪಂಜರವನ್ನು ಪತ್ತೆ ‌ಮಾಡಿ. ಮುಂದಿನ ತನಿಖೆ ಕೈಗೊಂಡಿದ್ದಾರೆ.

Ramesh Babu

Journalist

Recent Posts

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

3 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

8 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

10 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

11 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago