Crime Update: ಹಣದ ವಿಚಾರಕ್ಕೆ ಸ್ನೇಹಿತರಿಂದಲೇ ಕೊಲೆ ಪ್ರಕರಣ: ಮಧುರೆ ಕೆರೆಯಲ್ಲಿ ಅಸ್ಥಿಪಂಜರ ಪತ್ತೆ: ‘ದೃಶ್ಯ’ ಸಿನಿಮಾದ ಮಾದರಿಯಲ್ಲಿ ಹೆಣ ಹೂತಿಟ್ಟು, ಸುಟ್ಟು, ಬೂದಿ ಹಾಗೂ ಮೂಳೆಗಳನ್ನ ಕೆರೆಗೆ ಹಾಕಿದ್ದ ಆರೋಪಿಗಳು

‘ದೃಶ್ಯ’ ಸಿನಿಮಾದ ಮಾದರಿಯಲ್ಲಿ ದೊಡ್ಡಬಳ್ಳಾಪುರದ ಹೊರವಲಯದ ನಾರಾಯಣ್ ಇನ್ಫೋಸಿಟಿಯಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ  ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ಸೋಕೋ ತಂಡದೊಂದಿಗೆ ಶವವನ್ನು ಹೂತಿಟ್ಟ ಸ್ಥಳವನ್ನು ಪರಿಶೀಲನೆ ನಡೆಸಿದ್ದರು.

ಪರಿಶೀಲನೆ ವೇಳೆ ಶವದ ತಲೆ ಕೂದಲು, ಚಪ್ಪಲಿ ಸಿಕ್ಕಿದ್ದು, ಹೆಚ್ಚಿನ ಮಾಹಿತಿಗಾಗಿ ಮಧುರೆ ಕೆರೆಯಲ್ಲಿ ಮೂಳೆಗಳ ಪತ್ತೆಗಾಗಿ ಶೋಧ ಕಾರ್ಯ‌ ನಡೆಸಿದಾಗ ಮೂಳೆಗಳು‌ ಪತ್ತೆಯಾಗಿವೆ.

ಅ.17ರಂದು ಹಣ ಕೊಡುತ್ತೇನೆಂದು ಗೌರಿಬಿದನೂರು ಕಡೆ ಕರೆದುಕೊಂಡು ಹೋಗಿ ಕಾರಲ್ಲಿ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಲ್ಲಲಾಗುತ್ತದೆ. ಕೊಲೆ ಮಾಡಿದ ನಂತರ ಅದೇ ರಾತ್ರಿ ಸುಮಾರು 10ಗಂಟೆ ಸಮಯದಲ್ಲಿ ಈಗಾಗಲೇ ಗುಂಡಿ ತೋಡಿದ್ದ ಸ್ಥಳಕ್ಕೆ ಶವವನ್ನು ತೆಗೆದುಕೊಂಡು ಬಂದು ಗುಂಡಿಯಲ್ಲಿ ಮುಚ್ಚಲಾಗುತ್ತದೆ. ನಂತರ ಅನುಮಾನ ಬರುತ್ತದೆ ಎಂದು ಶವವನ್ನು ಗುಂಡಿಯಿಂದ ತೆಗೆದು ಗ್ಯಾರೇಜ್ ನಿಂದ ಮೆಟಲ್ ಡ್ರಂ ತಂದು ಅದರಲ್ಲಿ ಶವವನ್ನು ಹಾಕಿ ಸುಡಲಾಗುತ್ತದೆ. ಸುಟ್ಟ ನಂತರ ಬೂದಿಯನ್ನು ಹಾಗೂ ಮೂಳೆಗಳನ್ನು ಮಧುರೆ ಕೆರೆಯಲ್ಲಿ ಹಾಕುತ್ತಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ..

ಇದೀಗ ಸುಟ್ಟ ಶವವನ್ನು ಮಧುರೆ ಕೆರೆಗೆ ಹಾಕಲಾಗಿದ್ದ ಅಸ್ಥಿಪಂಜರವನ್ನು ಪತ್ತೆ ‌ಮಾಡಿ. ಮುಂದಿನ ತನಿಖೆ ಕೈಗೊಂಡಿದ್ದಾರೆ.

Ramesh Babu

Journalist

Recent Posts

ಚರಂಡಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ..!

ಚರಂಡಿಯಲ್ಲಿ‌ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿರುವ ಘಟನೆ ದೇವನಹಳ್ಳಿ ಪಟ್ಟಣದ ಸ್ವರ್ಣಾದ್ರಿ ಹೋಟೆಲ್ ಮುಂಭಾಗದಲ್ಲಿ ನಡೆದಿದೆ... ಮಹಿಳೆ…

10 minutes ago

ಮಾ.6ರಂದು ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆ: ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹ

ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹಿಸಿ ಮಾ.6ರಂದು ಬೆಂಗಳೂರಿನ…

3 hours ago

ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ: ವಿಜೇತರಿಗೆ ಬಹುಮಾನ ವಿತರಣೆ

ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…

6 hours ago

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

18 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

19 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

19 hours ago