Crime Update: ಹಣದ ವಿಚಾರಕ್ಕೆ ಸ್ನೇಹಿತರಿಂದಲೇ ಕೊಲೆ ಪ್ರಕರಣ: ಮಧುರೆ ಕೆರೆಯಲ್ಲಿ ಅಸ್ಥಿಪಂಜರ ಪತ್ತೆ: ‘ದೃಶ್ಯ’ ಸಿನಿಮಾದ ಮಾದರಿಯಲ್ಲಿ ಹೆಣ ಹೂತಿಟ್ಟು, ಸುಟ್ಟು, ಬೂದಿ ಹಾಗೂ ಮೂಳೆಗಳನ್ನ ಕೆರೆಗೆ ಹಾಕಿದ್ದ ಆರೋಪಿಗಳು

‘ದೃಶ್ಯ’ ಸಿನಿಮಾದ ಮಾದರಿಯಲ್ಲಿ ದೊಡ್ಡಬಳ್ಳಾಪುರದ ಹೊರವಲಯದ ನಾರಾಯಣ್ ಇನ್ಫೋಸಿಟಿಯಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ  ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ಸೋಕೋ ತಂಡದೊಂದಿಗೆ ಶವವನ್ನು ಹೂತಿಟ್ಟ ಸ್ಥಳವನ್ನು ಪರಿಶೀಲನೆ ನಡೆಸಿದ್ದರು.

ಪರಿಶೀಲನೆ ವೇಳೆ ಶವದ ತಲೆ ಕೂದಲು, ಚಪ್ಪಲಿ ಸಿಕ್ಕಿದ್ದು, ಹೆಚ್ಚಿನ ಮಾಹಿತಿಗಾಗಿ ಮಧುರೆ ಕೆರೆಯಲ್ಲಿ ಮೂಳೆಗಳ ಪತ್ತೆಗಾಗಿ ಶೋಧ ಕಾರ್ಯ‌ ನಡೆಸಿದಾಗ ಮೂಳೆಗಳು‌ ಪತ್ತೆಯಾಗಿವೆ.

ಅ.17ರಂದು ಹಣ ಕೊಡುತ್ತೇನೆಂದು ಗೌರಿಬಿದನೂರು ಕಡೆ ಕರೆದುಕೊಂಡು ಹೋಗಿ ಕಾರಲ್ಲಿ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಲ್ಲಲಾಗುತ್ತದೆ. ಕೊಲೆ ಮಾಡಿದ ನಂತರ ಅದೇ ರಾತ್ರಿ ಸುಮಾರು 10ಗಂಟೆ ಸಮಯದಲ್ಲಿ ಈಗಾಗಲೇ ಗುಂಡಿ ತೋಡಿದ್ದ ಸ್ಥಳಕ್ಕೆ ಶವವನ್ನು ತೆಗೆದುಕೊಂಡು ಬಂದು ಗುಂಡಿಯಲ್ಲಿ ಮುಚ್ಚಲಾಗುತ್ತದೆ. ನಂತರ ಅನುಮಾನ ಬರುತ್ತದೆ ಎಂದು ಶವವನ್ನು ಗುಂಡಿಯಿಂದ ತೆಗೆದು ಗ್ಯಾರೇಜ್ ನಿಂದ ಮೆಟಲ್ ಡ್ರಂ ತಂದು ಅದರಲ್ಲಿ ಶವವನ್ನು ಹಾಕಿ ಸುಡಲಾಗುತ್ತದೆ. ಸುಟ್ಟ ನಂತರ ಬೂದಿಯನ್ನು ಹಾಗೂ ಮೂಳೆಗಳನ್ನು ಮಧುರೆ ಕೆರೆಯಲ್ಲಿ ಹಾಕುತ್ತಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ..

ಇದೀಗ ಸುಟ್ಟ ಶವವನ್ನು ಮಧುರೆ ಕೆರೆಗೆ ಹಾಕಲಾಗಿದ್ದ ಅಸ್ಥಿಪಂಜರವನ್ನು ಪತ್ತೆ ‌ಮಾಡಿ. ಮುಂದಿನ ತನಿಖೆ ಕೈಗೊಂಡಿದ್ದಾರೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

12 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago