Crime Update: ಹಣದ ವಿಚಾರಕ್ಕೆ ಸ್ನೇಹಿತರಿಂದಲೇ ಕೊಲೆ ಪ್ರಕರಣ: ಮಧುರೆ ಕೆರೆಯಲ್ಲಿ ಅಸ್ಥಿಪಂಜರ ಪತ್ತೆ: ‘ದೃಶ್ಯ’ ಸಿನಿಮಾದ ಮಾದರಿಯಲ್ಲಿ ಹೆಣ ಹೂತಿಟ್ಟು, ಸುಟ್ಟು, ಬೂದಿ ಹಾಗೂ ಮೂಳೆಗಳನ್ನ ಕೆರೆಗೆ ಹಾಕಿದ್ದ ಆರೋಪಿಗಳು

‘ದೃಶ್ಯ’ ಸಿನಿಮಾದ ಮಾದರಿಯಲ್ಲಿ ದೊಡ್ಡಬಳ್ಳಾಪುರದ ಹೊರವಲಯದ ನಾರಾಯಣ್ ಇನ್ಫೋಸಿಟಿಯಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ  ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ಸೋಕೋ ತಂಡದೊಂದಿಗೆ ಶವವನ್ನು ಹೂತಿಟ್ಟ ಸ್ಥಳವನ್ನು ಪರಿಶೀಲನೆ ನಡೆಸಿದ್ದರು.

ಪರಿಶೀಲನೆ ವೇಳೆ ಶವದ ತಲೆ ಕೂದಲು, ಚಪ್ಪಲಿ ಸಿಕ್ಕಿದ್ದು, ಹೆಚ್ಚಿನ ಮಾಹಿತಿಗಾಗಿ ಮಧುರೆ ಕೆರೆಯಲ್ಲಿ ಮೂಳೆಗಳ ಪತ್ತೆಗಾಗಿ ಶೋಧ ಕಾರ್ಯ‌ ನಡೆಸಿದಾಗ ಮೂಳೆಗಳು‌ ಪತ್ತೆಯಾಗಿವೆ.

ಅ.17ರಂದು ಹಣ ಕೊಡುತ್ತೇನೆಂದು ಗೌರಿಬಿದನೂರು ಕಡೆ ಕರೆದುಕೊಂಡು ಹೋಗಿ ಕಾರಲ್ಲಿ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಲ್ಲಲಾಗುತ್ತದೆ. ಕೊಲೆ ಮಾಡಿದ ನಂತರ ಅದೇ ರಾತ್ರಿ ಸುಮಾರು 10ಗಂಟೆ ಸಮಯದಲ್ಲಿ ಈಗಾಗಲೇ ಗುಂಡಿ ತೋಡಿದ್ದ ಸ್ಥಳಕ್ಕೆ ಶವವನ್ನು ತೆಗೆದುಕೊಂಡು ಬಂದು ಗುಂಡಿಯಲ್ಲಿ ಮುಚ್ಚಲಾಗುತ್ತದೆ. ನಂತರ ಅನುಮಾನ ಬರುತ್ತದೆ ಎಂದು ಶವವನ್ನು ಗುಂಡಿಯಿಂದ ತೆಗೆದು ಗ್ಯಾರೇಜ್ ನಿಂದ ಮೆಟಲ್ ಡ್ರಂ ತಂದು ಅದರಲ್ಲಿ ಶವವನ್ನು ಹಾಕಿ ಸುಡಲಾಗುತ್ತದೆ. ಸುಟ್ಟ ನಂತರ ಬೂದಿಯನ್ನು ಹಾಗೂ ಮೂಳೆಗಳನ್ನು ಮಧುರೆ ಕೆರೆಯಲ್ಲಿ ಹಾಕುತ್ತಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ..

ಇದೀಗ ಸುಟ್ಟ ಶವವನ್ನು ಮಧುರೆ ಕೆರೆಗೆ ಹಾಕಲಾಗಿದ್ದ ಅಸ್ಥಿಪಂಜರವನ್ನು ಪತ್ತೆ ‌ಮಾಡಿ. ಮುಂದಿನ ತನಿಖೆ ಕೈಗೊಂಡಿದ್ದಾರೆ.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

8 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

9 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

15 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago