Crime Update: ಹಣದ ವಿಚಾರಕ್ಕೆ ಸ್ನೇಹಿತರಿಂದಲೇ ಕೊಲೆ ಪ್ರಕರಣ: ಮಧುರೆ ಕೆರೆಯಲ್ಲಿ ಅಸ್ಥಿಪಂಜರ ಪತ್ತೆ: ‘ದೃಶ್ಯ’ ಸಿನಿಮಾದ ಮಾದರಿಯಲ್ಲಿ ಹೆಣ ಹೂತಿಟ್ಟು, ಸುಟ್ಟು, ಬೂದಿ ಹಾಗೂ ಮೂಳೆಗಳನ್ನ ಕೆರೆಗೆ ಹಾಕಿದ್ದ ಆರೋಪಿಗಳು

‘ದೃಶ್ಯ’ ಸಿನಿಮಾದ ಮಾದರಿಯಲ್ಲಿ ದೊಡ್ಡಬಳ್ಳಾಪುರದ ಹೊರವಲಯದ ನಾರಾಯಣ್ ಇನ್ಫೋಸಿಟಿಯಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ  ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ಸೋಕೋ ತಂಡದೊಂದಿಗೆ ಶವವನ್ನು ಹೂತಿಟ್ಟ ಸ್ಥಳವನ್ನು ಪರಿಶೀಲನೆ ನಡೆಸಿದ್ದರು.

ಪರಿಶೀಲನೆ ವೇಳೆ ಶವದ ತಲೆ ಕೂದಲು, ಚಪ್ಪಲಿ ಸಿಕ್ಕಿದ್ದು, ಹೆಚ್ಚಿನ ಮಾಹಿತಿಗಾಗಿ ಮಧುರೆ ಕೆರೆಯಲ್ಲಿ ಮೂಳೆಗಳ ಪತ್ತೆಗಾಗಿ ಶೋಧ ಕಾರ್ಯ‌ ನಡೆಸಿದಾಗ ಮೂಳೆಗಳು‌ ಪತ್ತೆಯಾಗಿವೆ.

ಅ.17ರಂದು ಹಣ ಕೊಡುತ್ತೇನೆಂದು ಗೌರಿಬಿದನೂರು ಕಡೆ ಕರೆದುಕೊಂಡು ಹೋಗಿ ಕಾರಲ್ಲಿ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಲ್ಲಲಾಗುತ್ತದೆ. ಕೊಲೆ ಮಾಡಿದ ನಂತರ ಅದೇ ರಾತ್ರಿ ಸುಮಾರು 10ಗಂಟೆ ಸಮಯದಲ್ಲಿ ಈಗಾಗಲೇ ಗುಂಡಿ ತೋಡಿದ್ದ ಸ್ಥಳಕ್ಕೆ ಶವವನ್ನು ತೆಗೆದುಕೊಂಡು ಬಂದು ಗುಂಡಿಯಲ್ಲಿ ಮುಚ್ಚಲಾಗುತ್ತದೆ. ನಂತರ ಅನುಮಾನ ಬರುತ್ತದೆ ಎಂದು ಶವವನ್ನು ಗುಂಡಿಯಿಂದ ತೆಗೆದು ಗ್ಯಾರೇಜ್ ನಿಂದ ಮೆಟಲ್ ಡ್ರಂ ತಂದು ಅದರಲ್ಲಿ ಶವವನ್ನು ಹಾಕಿ ಸುಡಲಾಗುತ್ತದೆ. ಸುಟ್ಟ ನಂತರ ಬೂದಿಯನ್ನು ಹಾಗೂ ಮೂಳೆಗಳನ್ನು ಮಧುರೆ ಕೆರೆಯಲ್ಲಿ ಹಾಕುತ್ತಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ..

ಇದೀಗ ಸುಟ್ಟ ಶವವನ್ನು ಮಧುರೆ ಕೆರೆಗೆ ಹಾಕಲಾಗಿದ್ದ ಅಸ್ಥಿಪಂಜರವನ್ನು ಪತ್ತೆ ‌ಮಾಡಿ. ಮುಂದಿನ ತನಿಖೆ ಕೈಗೊಂಡಿದ್ದಾರೆ.

Ramesh Babu

Journalist

Recent Posts

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

4 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

7 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

12 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

13 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

13 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

15 hours ago