ಕಡಿತಗೊಂಡ ಸೇವಾ ಸಿಂಧು ಆನ್ ಲೈನ್ ಸೇವೆಗಳು: ಸಂಕಷ್ಟದಲ್ಲಿ CSC ಸೇವಾ ಸಿಂಧು ಆಪರೇಟರ್ಸ್…!

ಸರ್ಕಾರ ಜಾರಿಗೆ ತರುವ ಯೋಜನಾ ಸವಲತ್ತುಗಳನ್ನು ಪಡೆಯಲು ಆನ್ ಲೈನ್ ಮುಖಾಂತರ ನೋಂದಣಿ ಮಾಡುವುದು ಕಡ್ಡಾಯವಾಗಿದೆ. ಆದ್ದರಿಂದ ಸಿ ಎಸ್ ಸಿ ಸೇವಾಸಿಂಧು, ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಸೇರಿದಂತೆ ವಿವಿಧ ಪೋರ್ಟ್ ಲ್ ಗಳನ್ನು ಅಸ್ತಿತ್ವಕ್ಕೆ ತರಲಾಗಿದೆ.

ಮೊದಲು ಎಲ್ಲಾ ಯೋಜನೆಗಳ ಸೌಲಭ್ಯ ಪಡೆಯಲು ಸೇವಾ ಸಿಂಧು ಪೋರ್ಟ್ ಲ್ ಮೂಲಕ ಅರ್ಜಿ ಹಾಕಲು ಅವಕಾಶ ಮಾಡಿಕೊಡಲಾಗಿತ್ತು. ಈಗ ದಿಢೀರನೆ ಸೇವಾ ಸಿಂಧು ಪೋರ್ಟ್ ಲನ್ನು ಪ್ರತ್ಯೇಕಿಸಿ ಕೇವಲ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಗೆ ನೀಡಿರುವುದು ಸೇವಾ ಸಿಂಧು ಮುಖೇನ ಅರ್ಜಿ ಸಲ್ಲಿಸುವ ಹಾಗು ಸಿ ಎಸ್ ಸಿ ಸೆಂಟರ್ ನಡೆಸುವ ಮಾಲೀಕರು ಸಂಕಷ್ಟದಲ್ಲಿದ್ದಾರೆ.

ಈ ಕುರಿತು ಬಿಎಸ್ ಎನ್ ಎಲ್ ಕಚೇರಿ ಸಮೀಪವಿರುವ ಸೈಬರ್ ಸೆಂಟರ್ ಮಾಲೀಕ‌ ಹಾಗೂ ಸಿಎಸ್ ಸಿ ಸೇವಾ ಸಿಂಧು ಆಪರೇಟರ್ ರವಿಚಂದ್ರ ಮಾತನಾಡಿ, ಕಳೆದ 10 ವರ್ಷಗಳಿಂದ ಕಾಮನ್ ಸರ್ವಿಸಸ್ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸುತ್ತಿದ್ದೇವೆ. ಆಧಾರ್ ತಿದ್ದುಪಡಿ, ಪಡಿತರ ತಿದ್ದುಪಡಿ, ವೋಟರ್ ಐಡಿ ತಿದ್ದುಪಡಿ, ಬ್ಯಾಂಕ್ ಅಕೌಂಟ್, ಉದ್ಯಮ್ ನೋಂದಣಿ, ಪವರ್ ಲೂಮ್ ಸಬ್ಸಿಡಿ, ವಿದ್ಯಾರ್ಥಿ ವೇತನ, ಜಿಎಸ್ ಟಿ ನೋಂದಣಿ, ಎಲ್ ಎಲ್ ಮತ್ತು ಡಿಎಲ್, ಹಿರಿಯ ನಾಗರಿಕರ ಗುರುತಿನ ಚೀಟಿ, ಪೊಲೀಸ್ ವೆರಿಫಿಕೇಶನ್ ಪ್ರಮಾಣ ಪತ್ರ, ಇ ಶ್ರಮ ಕಾರ್ಡ್, ವಿದ್ಯಾರ್ಥಿಗಳ ಬಸ್ ಪಾಸ್, ವಿದ್ಯಾರ್ಥಿ ವೇತನ ಹಾಗು ಹಾಗು ಹಲವು ಸರ್ಕಾರಿ ಸೌಲಭ್ಯಗಳ ಅರ್ಜಿಗಳನ್ನು ಸೇವಸಿಂಧು ಪೋರ್ಟಲ್ ನ ಮುಖಾಂತರ ಸಲ್ಲಿಸುತ್ತಿದ್ದೆವು ಆದರೆ ಇತ್ತೀಚಿನ ಕೆಲವು ಗ್ಯಾರೆಂಟಿ ಯೋಜನೆಗಳು ಒಂದೊಂದಾಗಿ ಪ್ರತ್ಯೇಕಿಸಿ ಆ ಯೋಜನೆಗಳ ಅರ್ಜಿಗಳನ್ನು ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಗೆ ನೀಡಿರುವುದು, ಸಿ ಎಸ್ ಸಿ ಸೆಂಟರ್ ಗಳನ್ನು ನಡೆಸಿ ಇಷ್ಟು ವರ್ಷಗಳಿಂದ ಜನ ಸೇವೆ ನೀಡಿ ಅದನ್ನೇ ಬದುಕಿಗೆ ಆಧಾರವಾಗಿ ನಂಬಿದ ನಮಗೆ ತುಂಬಾ ನಷ್ಟವಾಗುತ್ತಿದೆ ಎಂದರಲ್ಲದೇ ನಾವು ಸರ್ಕಾರದ ಮಾನದಂಡಗಳನ್ನು ಅನುಸರಿಸಿಯೇ ಅನ್ ಲೈನ್ ಸೇವೆಗಳನ್ನ ಸಾರ್ವಜನಿಕರಿಗೆ ನೀಡುತ್ತಿದ್ದೇವೆ ಆದರೂ ಸೇವಾ ಸಿಂಧುವಿನ ಕೆಲವು ಸೇವೆಗಳನ್ನು ಕಡಿತಗೊಳಿಸಿರುವುದರಿಂದ ನಮಗೆ ಅನ್ಯಾಯವಾಗಿದೆ ಎಂದು ತಮ್ಮ ಅಳಲನ್ನ ತೋಡಿಕೊಂಡರು.

ನಾವು ಸೈಬರ್ ನಡೆಸಿ ಜೀವನ ಮಾಡಬೇಕು, ಸೇವಾ ಸಿಂಧು ಪೋರ್ಟ್ ಲ್ ಪ್ರತ್ಯೇಕಿಸಿರುವುದರಿಂದ ಅಂಗಡಿ ಬಾಡಿಗೆ, ವಿದ್ಯುತ್ ಬಿಲ್, ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇದ್ದೇವೆ. ದಯಮಾಡಿ ಕರ್ನಾಟಕ, ಬೆಂಗಳೂರು, ಗ್ರಾಮ ಒನ್ ಗೆ ನೀಡಿರುವ ಆನ್ ಲೈನ್ ಸೇವೆಗಳನ್ನ ಸೇವಾ ಸಿಂಧು ಪೋರ್ಟ್ ಲ್ ಗೂ ನೀಡಿ ಎಂದು ಒತ್ತಾಯಿಸಿದರು.

Ramesh Babu

Journalist

View Comments

  • SIR I AM CSC CENTAR MAN NAU 4 VARSHAGALIND CSC NADESUTIDDENE SEVA SHINDU PORTALLINALLI BAHALA APPLEACATION TEGEDU HAKI NAMMA HOTTEMELE BARE HAKIDANTAGIDE ADDARIND ADHIKARIGALALLI KELIKOLLUVUDENENDARE GRAMA ONE, KARNATAKA ONE GE NIDID SAVALATTIU GALANNU CSC GU KODI ENDU ADIKARIGALLI KALAKALIEND KELIKOLLUTTENE

Recent Posts

ನೇಪಾಳದ ದಂಗೆ……

ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…

6 hours ago

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

9 hours ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

19 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

20 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

23 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

1 day ago