ಕಡಿತಗೊಂಡ ಸೇವಾ ಸಿಂಧು ಆನ್ ಲೈನ್ ಸೇವೆಗಳು: ಸಂಕಷ್ಟದಲ್ಲಿ CSC ಸೇವಾ ಸಿಂಧು ಆಪರೇಟರ್ಸ್…!

ಸರ್ಕಾರ ಜಾರಿಗೆ ತರುವ ಯೋಜನಾ ಸವಲತ್ತುಗಳನ್ನು ಪಡೆಯಲು ಆನ್ ಲೈನ್ ಮುಖಾಂತರ ನೋಂದಣಿ ಮಾಡುವುದು ಕಡ್ಡಾಯವಾಗಿದೆ. ಆದ್ದರಿಂದ ಸಿ ಎಸ್ ಸಿ ಸೇವಾಸಿಂಧು, ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಸೇರಿದಂತೆ ವಿವಿಧ ಪೋರ್ಟ್ ಲ್ ಗಳನ್ನು ಅಸ್ತಿತ್ವಕ್ಕೆ ತರಲಾಗಿದೆ.

ಮೊದಲು ಎಲ್ಲಾ ಯೋಜನೆಗಳ ಸೌಲಭ್ಯ ಪಡೆಯಲು ಸೇವಾ ಸಿಂಧು ಪೋರ್ಟ್ ಲ್ ಮೂಲಕ ಅರ್ಜಿ ಹಾಕಲು ಅವಕಾಶ ಮಾಡಿಕೊಡಲಾಗಿತ್ತು. ಈಗ ದಿಢೀರನೆ ಸೇವಾ ಸಿಂಧು ಪೋರ್ಟ್ ಲನ್ನು ಪ್ರತ್ಯೇಕಿಸಿ ಕೇವಲ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಗೆ ನೀಡಿರುವುದು ಸೇವಾ ಸಿಂಧು ಮುಖೇನ ಅರ್ಜಿ ಸಲ್ಲಿಸುವ ಹಾಗು ಸಿ ಎಸ್ ಸಿ ಸೆಂಟರ್ ನಡೆಸುವ ಮಾಲೀಕರು ಸಂಕಷ್ಟದಲ್ಲಿದ್ದಾರೆ.

ಈ ಕುರಿತು ಬಿಎಸ್ ಎನ್ ಎಲ್ ಕಚೇರಿ ಸಮೀಪವಿರುವ ಸೈಬರ್ ಸೆಂಟರ್ ಮಾಲೀಕ‌ ಹಾಗೂ ಸಿಎಸ್ ಸಿ ಸೇವಾ ಸಿಂಧು ಆಪರೇಟರ್ ರವಿಚಂದ್ರ ಮಾತನಾಡಿ, ಕಳೆದ 10 ವರ್ಷಗಳಿಂದ ಕಾಮನ್ ಸರ್ವಿಸಸ್ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸುತ್ತಿದ್ದೇವೆ. ಆಧಾರ್ ತಿದ್ದುಪಡಿ, ಪಡಿತರ ತಿದ್ದುಪಡಿ, ವೋಟರ್ ಐಡಿ ತಿದ್ದುಪಡಿ, ಬ್ಯಾಂಕ್ ಅಕೌಂಟ್, ಉದ್ಯಮ್ ನೋಂದಣಿ, ಪವರ್ ಲೂಮ್ ಸಬ್ಸಿಡಿ, ವಿದ್ಯಾರ್ಥಿ ವೇತನ, ಜಿಎಸ್ ಟಿ ನೋಂದಣಿ, ಎಲ್ ಎಲ್ ಮತ್ತು ಡಿಎಲ್, ಹಿರಿಯ ನಾಗರಿಕರ ಗುರುತಿನ ಚೀಟಿ, ಪೊಲೀಸ್ ವೆರಿಫಿಕೇಶನ್ ಪ್ರಮಾಣ ಪತ್ರ, ಇ ಶ್ರಮ ಕಾರ್ಡ್, ವಿದ್ಯಾರ್ಥಿಗಳ ಬಸ್ ಪಾಸ್, ವಿದ್ಯಾರ್ಥಿ ವೇತನ ಹಾಗು ಹಾಗು ಹಲವು ಸರ್ಕಾರಿ ಸೌಲಭ್ಯಗಳ ಅರ್ಜಿಗಳನ್ನು ಸೇವಸಿಂಧು ಪೋರ್ಟಲ್ ನ ಮುಖಾಂತರ ಸಲ್ಲಿಸುತ್ತಿದ್ದೆವು ಆದರೆ ಇತ್ತೀಚಿನ ಕೆಲವು ಗ್ಯಾರೆಂಟಿ ಯೋಜನೆಗಳು ಒಂದೊಂದಾಗಿ ಪ್ರತ್ಯೇಕಿಸಿ ಆ ಯೋಜನೆಗಳ ಅರ್ಜಿಗಳನ್ನು ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಗೆ ನೀಡಿರುವುದು, ಸಿ ಎಸ್ ಸಿ ಸೆಂಟರ್ ಗಳನ್ನು ನಡೆಸಿ ಇಷ್ಟು ವರ್ಷಗಳಿಂದ ಜನ ಸೇವೆ ನೀಡಿ ಅದನ್ನೇ ಬದುಕಿಗೆ ಆಧಾರವಾಗಿ ನಂಬಿದ ನಮಗೆ ತುಂಬಾ ನಷ್ಟವಾಗುತ್ತಿದೆ ಎಂದರಲ್ಲದೇ ನಾವು ಸರ್ಕಾರದ ಮಾನದಂಡಗಳನ್ನು ಅನುಸರಿಸಿಯೇ ಅನ್ ಲೈನ್ ಸೇವೆಗಳನ್ನ ಸಾರ್ವಜನಿಕರಿಗೆ ನೀಡುತ್ತಿದ್ದೇವೆ ಆದರೂ ಸೇವಾ ಸಿಂಧುವಿನ ಕೆಲವು ಸೇವೆಗಳನ್ನು ಕಡಿತಗೊಳಿಸಿರುವುದರಿಂದ ನಮಗೆ ಅನ್ಯಾಯವಾಗಿದೆ ಎಂದು ತಮ್ಮ ಅಳಲನ್ನ ತೋಡಿಕೊಂಡರು.

ನಾವು ಸೈಬರ್ ನಡೆಸಿ ಜೀವನ ಮಾಡಬೇಕು, ಸೇವಾ ಸಿಂಧು ಪೋರ್ಟ್ ಲ್ ಪ್ರತ್ಯೇಕಿಸಿರುವುದರಿಂದ ಅಂಗಡಿ ಬಾಡಿಗೆ, ವಿದ್ಯುತ್ ಬಿಲ್, ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇದ್ದೇವೆ. ದಯಮಾಡಿ ಕರ್ನಾಟಕ, ಬೆಂಗಳೂರು, ಗ್ರಾಮ ಒನ್ ಗೆ ನೀಡಿರುವ ಆನ್ ಲೈನ್ ಸೇವೆಗಳನ್ನ ಸೇವಾ ಸಿಂಧು ಪೋರ್ಟ್ ಲ್ ಗೂ ನೀಡಿ ಎಂದು ಒತ್ತಾಯಿಸಿದರು.

Ramesh Babu

Journalist

View Comments

  • SIR I AM CSC CENTAR MAN NAU 4 VARSHAGALIND CSC NADESUTIDDENE SEVA SHINDU PORTALLINALLI BAHALA APPLEACATION TEGEDU HAKI NAMMA HOTTEMELE BARE HAKIDANTAGIDE ADDARIND ADHIKARIGALALLI KELIKOLLUVUDENENDARE GRAMA ONE, KARNATAKA ONE GE NIDID SAVALATTIU GALANNU CSC GU KODI ENDU ADIKARIGALLI KALAKALIEND KELIKOLLUTTENE

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

14 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

20 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

3 days ago