ಕಡಿತಗೊಂಡ ಸೇವಾ ಸಿಂಧು ಆನ್ ಲೈನ್ ಸೇವೆಗಳು: ಸಂಕಷ್ಟದಲ್ಲಿ CSC ಸೇವಾ ಸಿಂಧು ಆಪರೇಟರ್ಸ್…!

ಸರ್ಕಾರ ಜಾರಿಗೆ ತರುವ ಯೋಜನಾ ಸವಲತ್ತುಗಳನ್ನು ಪಡೆಯಲು ಆನ್ ಲೈನ್ ಮುಖಾಂತರ ನೋಂದಣಿ ಮಾಡುವುದು ಕಡ್ಡಾಯವಾಗಿದೆ. ಆದ್ದರಿಂದ ಸಿ ಎಸ್ ಸಿ ಸೇವಾಸಿಂಧು, ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಸೇರಿದಂತೆ ವಿವಿಧ ಪೋರ್ಟ್ ಲ್ ಗಳನ್ನು ಅಸ್ತಿತ್ವಕ್ಕೆ ತರಲಾಗಿದೆ.

ಮೊದಲು ಎಲ್ಲಾ ಯೋಜನೆಗಳ ಸೌಲಭ್ಯ ಪಡೆಯಲು ಸೇವಾ ಸಿಂಧು ಪೋರ್ಟ್ ಲ್ ಮೂಲಕ ಅರ್ಜಿ ಹಾಕಲು ಅವಕಾಶ ಮಾಡಿಕೊಡಲಾಗಿತ್ತು. ಈಗ ದಿಢೀರನೆ ಸೇವಾ ಸಿಂಧು ಪೋರ್ಟ್ ಲನ್ನು ಪ್ರತ್ಯೇಕಿಸಿ ಕೇವಲ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಗೆ ನೀಡಿರುವುದು ಸೇವಾ ಸಿಂಧು ಮುಖೇನ ಅರ್ಜಿ ಸಲ್ಲಿಸುವ ಹಾಗು ಸಿ ಎಸ್ ಸಿ ಸೆಂಟರ್ ನಡೆಸುವ ಮಾಲೀಕರು ಸಂಕಷ್ಟದಲ್ಲಿದ್ದಾರೆ.

ಈ ಕುರಿತು ಬಿಎಸ್ ಎನ್ ಎಲ್ ಕಚೇರಿ ಸಮೀಪವಿರುವ ಸೈಬರ್ ಸೆಂಟರ್ ಮಾಲೀಕ‌ ಹಾಗೂ ಸಿಎಸ್ ಸಿ ಸೇವಾ ಸಿಂಧು ಆಪರೇಟರ್ ರವಿಚಂದ್ರ ಮಾತನಾಡಿ, ಕಳೆದ 10 ವರ್ಷಗಳಿಂದ ಕಾಮನ್ ಸರ್ವಿಸಸ್ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸುತ್ತಿದ್ದೇವೆ. ಆಧಾರ್ ತಿದ್ದುಪಡಿ, ಪಡಿತರ ತಿದ್ದುಪಡಿ, ವೋಟರ್ ಐಡಿ ತಿದ್ದುಪಡಿ, ಬ್ಯಾಂಕ್ ಅಕೌಂಟ್, ಉದ್ಯಮ್ ನೋಂದಣಿ, ಪವರ್ ಲೂಮ್ ಸಬ್ಸಿಡಿ, ವಿದ್ಯಾರ್ಥಿ ವೇತನ, ಜಿಎಸ್ ಟಿ ನೋಂದಣಿ, ಎಲ್ ಎಲ್ ಮತ್ತು ಡಿಎಲ್, ಹಿರಿಯ ನಾಗರಿಕರ ಗುರುತಿನ ಚೀಟಿ, ಪೊಲೀಸ್ ವೆರಿಫಿಕೇಶನ್ ಪ್ರಮಾಣ ಪತ್ರ, ಇ ಶ್ರಮ ಕಾರ್ಡ್, ವಿದ್ಯಾರ್ಥಿಗಳ ಬಸ್ ಪಾಸ್, ವಿದ್ಯಾರ್ಥಿ ವೇತನ ಹಾಗು ಹಾಗು ಹಲವು ಸರ್ಕಾರಿ ಸೌಲಭ್ಯಗಳ ಅರ್ಜಿಗಳನ್ನು ಸೇವಸಿಂಧು ಪೋರ್ಟಲ್ ನ ಮುಖಾಂತರ ಸಲ್ಲಿಸುತ್ತಿದ್ದೆವು ಆದರೆ ಇತ್ತೀಚಿನ ಕೆಲವು ಗ್ಯಾರೆಂಟಿ ಯೋಜನೆಗಳು ಒಂದೊಂದಾಗಿ ಪ್ರತ್ಯೇಕಿಸಿ ಆ ಯೋಜನೆಗಳ ಅರ್ಜಿಗಳನ್ನು ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಗೆ ನೀಡಿರುವುದು, ಸಿ ಎಸ್ ಸಿ ಸೆಂಟರ್ ಗಳನ್ನು ನಡೆಸಿ ಇಷ್ಟು ವರ್ಷಗಳಿಂದ ಜನ ಸೇವೆ ನೀಡಿ ಅದನ್ನೇ ಬದುಕಿಗೆ ಆಧಾರವಾಗಿ ನಂಬಿದ ನಮಗೆ ತುಂಬಾ ನಷ್ಟವಾಗುತ್ತಿದೆ ಎಂದರಲ್ಲದೇ ನಾವು ಸರ್ಕಾರದ ಮಾನದಂಡಗಳನ್ನು ಅನುಸರಿಸಿಯೇ ಅನ್ ಲೈನ್ ಸೇವೆಗಳನ್ನ ಸಾರ್ವಜನಿಕರಿಗೆ ನೀಡುತ್ತಿದ್ದೇವೆ ಆದರೂ ಸೇವಾ ಸಿಂಧುವಿನ ಕೆಲವು ಸೇವೆಗಳನ್ನು ಕಡಿತಗೊಳಿಸಿರುವುದರಿಂದ ನಮಗೆ ಅನ್ಯಾಯವಾಗಿದೆ ಎಂದು ತಮ್ಮ ಅಳಲನ್ನ ತೋಡಿಕೊಂಡರು.

ನಾವು ಸೈಬರ್ ನಡೆಸಿ ಜೀವನ ಮಾಡಬೇಕು, ಸೇವಾ ಸಿಂಧು ಪೋರ್ಟ್ ಲ್ ಪ್ರತ್ಯೇಕಿಸಿರುವುದರಿಂದ ಅಂಗಡಿ ಬಾಡಿಗೆ, ವಿದ್ಯುತ್ ಬಿಲ್, ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇದ್ದೇವೆ. ದಯಮಾಡಿ ಕರ್ನಾಟಕ, ಬೆಂಗಳೂರು, ಗ್ರಾಮ ಒನ್ ಗೆ ನೀಡಿರುವ ಆನ್ ಲೈನ್ ಸೇವೆಗಳನ್ನ ಸೇವಾ ಸಿಂಧು ಪೋರ್ಟ್ ಲ್ ಗೂ ನೀಡಿ ಎಂದು ಒತ್ತಾಯಿಸಿದರು.

Ramesh Babu

Journalist

View Comments

  • SIR I AM CSC CENTAR MAN NAU 4 VARSHAGALIND CSC NADESUTIDDENE SEVA SHINDU PORTALLINALLI BAHALA APPLEACATION TEGEDU HAKI NAMMA HOTTEMELE BARE HAKIDANTAGIDE ADDARIND ADHIKARIGALALLI KELIKOLLUVUDENENDARE GRAMA ONE, KARNATAKA ONE GE NIDID SAVALATTIU GALANNU CSC GU KODI ENDU ADIKARIGALLI KALAKALIEND KELIKOLLUTTENE

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

59 minutes ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

6 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago