ಕಡಿತಗೊಂಡ ಸೇವಾ ಸಿಂಧು ಆನ್ ಲೈನ್ ಸೇವೆಗಳು: ಸಂಕಷ್ಟದಲ್ಲಿ CSC ಸೇವಾ ಸಿಂಧು ಆಪರೇಟರ್ಸ್…!

ಸರ್ಕಾರ ಜಾರಿಗೆ ತರುವ ಯೋಜನಾ ಸವಲತ್ತುಗಳನ್ನು ಪಡೆಯಲು ಆನ್ ಲೈನ್ ಮುಖಾಂತರ ನೋಂದಣಿ ಮಾಡುವುದು ಕಡ್ಡಾಯವಾಗಿದೆ. ಆದ್ದರಿಂದ ಸಿ ಎಸ್ ಸಿ ಸೇವಾಸಿಂಧು, ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಸೇರಿದಂತೆ ವಿವಿಧ ಪೋರ್ಟ್ ಲ್ ಗಳನ್ನು ಅಸ್ತಿತ್ವಕ್ಕೆ ತರಲಾಗಿದೆ.

ಮೊದಲು ಎಲ್ಲಾ ಯೋಜನೆಗಳ ಸೌಲಭ್ಯ ಪಡೆಯಲು ಸೇವಾ ಸಿಂಧು ಪೋರ್ಟ್ ಲ್ ಮೂಲಕ ಅರ್ಜಿ ಹಾಕಲು ಅವಕಾಶ ಮಾಡಿಕೊಡಲಾಗಿತ್ತು. ಈಗ ದಿಢೀರನೆ ಸೇವಾ ಸಿಂಧು ಪೋರ್ಟ್ ಲನ್ನು ಪ್ರತ್ಯೇಕಿಸಿ ಕೇವಲ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಗೆ ನೀಡಿರುವುದು ಸೇವಾ ಸಿಂಧು ಮುಖೇನ ಅರ್ಜಿ ಸಲ್ಲಿಸುವ ಹಾಗು ಸಿ ಎಸ್ ಸಿ ಸೆಂಟರ್ ನಡೆಸುವ ಮಾಲೀಕರು ಸಂಕಷ್ಟದಲ್ಲಿದ್ದಾರೆ.

ಈ ಕುರಿತು ಬಿಎಸ್ ಎನ್ ಎಲ್ ಕಚೇರಿ ಸಮೀಪವಿರುವ ಸೈಬರ್ ಸೆಂಟರ್ ಮಾಲೀಕ‌ ಹಾಗೂ ಸಿಎಸ್ ಸಿ ಸೇವಾ ಸಿಂಧು ಆಪರೇಟರ್ ರವಿಚಂದ್ರ ಮಾತನಾಡಿ, ಕಳೆದ 10 ವರ್ಷಗಳಿಂದ ಕಾಮನ್ ಸರ್ವಿಸಸ್ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸುತ್ತಿದ್ದೇವೆ. ಆಧಾರ್ ತಿದ್ದುಪಡಿ, ಪಡಿತರ ತಿದ್ದುಪಡಿ, ವೋಟರ್ ಐಡಿ ತಿದ್ದುಪಡಿ, ಬ್ಯಾಂಕ್ ಅಕೌಂಟ್, ಉದ್ಯಮ್ ನೋಂದಣಿ, ಪವರ್ ಲೂಮ್ ಸಬ್ಸಿಡಿ, ವಿದ್ಯಾರ್ಥಿ ವೇತನ, ಜಿಎಸ್ ಟಿ ನೋಂದಣಿ, ಎಲ್ ಎಲ್ ಮತ್ತು ಡಿಎಲ್, ಹಿರಿಯ ನಾಗರಿಕರ ಗುರುತಿನ ಚೀಟಿ, ಪೊಲೀಸ್ ವೆರಿಫಿಕೇಶನ್ ಪ್ರಮಾಣ ಪತ್ರ, ಇ ಶ್ರಮ ಕಾರ್ಡ್, ವಿದ್ಯಾರ್ಥಿಗಳ ಬಸ್ ಪಾಸ್, ವಿದ್ಯಾರ್ಥಿ ವೇತನ ಹಾಗು ಹಾಗು ಹಲವು ಸರ್ಕಾರಿ ಸೌಲಭ್ಯಗಳ ಅರ್ಜಿಗಳನ್ನು ಸೇವಸಿಂಧು ಪೋರ್ಟಲ್ ನ ಮುಖಾಂತರ ಸಲ್ಲಿಸುತ್ತಿದ್ದೆವು ಆದರೆ ಇತ್ತೀಚಿನ ಕೆಲವು ಗ್ಯಾರೆಂಟಿ ಯೋಜನೆಗಳು ಒಂದೊಂದಾಗಿ ಪ್ರತ್ಯೇಕಿಸಿ ಆ ಯೋಜನೆಗಳ ಅರ್ಜಿಗಳನ್ನು ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಗೆ ನೀಡಿರುವುದು, ಸಿ ಎಸ್ ಸಿ ಸೆಂಟರ್ ಗಳನ್ನು ನಡೆಸಿ ಇಷ್ಟು ವರ್ಷಗಳಿಂದ ಜನ ಸೇವೆ ನೀಡಿ ಅದನ್ನೇ ಬದುಕಿಗೆ ಆಧಾರವಾಗಿ ನಂಬಿದ ನಮಗೆ ತುಂಬಾ ನಷ್ಟವಾಗುತ್ತಿದೆ ಎಂದರಲ್ಲದೇ ನಾವು ಸರ್ಕಾರದ ಮಾನದಂಡಗಳನ್ನು ಅನುಸರಿಸಿಯೇ ಅನ್ ಲೈನ್ ಸೇವೆಗಳನ್ನ ಸಾರ್ವಜನಿಕರಿಗೆ ನೀಡುತ್ತಿದ್ದೇವೆ ಆದರೂ ಸೇವಾ ಸಿಂಧುವಿನ ಕೆಲವು ಸೇವೆಗಳನ್ನು ಕಡಿತಗೊಳಿಸಿರುವುದರಿಂದ ನಮಗೆ ಅನ್ಯಾಯವಾಗಿದೆ ಎಂದು ತಮ್ಮ ಅಳಲನ್ನ ತೋಡಿಕೊಂಡರು.

ನಾವು ಸೈಬರ್ ನಡೆಸಿ ಜೀವನ ಮಾಡಬೇಕು, ಸೇವಾ ಸಿಂಧು ಪೋರ್ಟ್ ಲ್ ಪ್ರತ್ಯೇಕಿಸಿರುವುದರಿಂದ ಅಂಗಡಿ ಬಾಡಿಗೆ, ವಿದ್ಯುತ್ ಬಿಲ್, ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇದ್ದೇವೆ. ದಯಮಾಡಿ ಕರ್ನಾಟಕ, ಬೆಂಗಳೂರು, ಗ್ರಾಮ ಒನ್ ಗೆ ನೀಡಿರುವ ಆನ್ ಲೈನ್ ಸೇವೆಗಳನ್ನ ಸೇವಾ ಸಿಂಧು ಪೋರ್ಟ್ ಲ್ ಗೂ ನೀಡಿ ಎಂದು ಒತ್ತಾಯಿಸಿದರು.

Ramesh Babu

Journalist

View Comments

  • SIR I AM CSC CENTAR MAN NAU 4 VARSHAGALIND CSC NADESUTIDDENE SEVA SHINDU PORTALLINALLI BAHALA APPLEACATION TEGEDU HAKI NAMMA HOTTEMELE BARE HAKIDANTAGIDE ADDARIND ADHIKARIGALALLI KELIKOLLUVUDENENDARE GRAMA ONE, KARNATAKA ONE GE NIDID SAVALATTIU GALANNU CSC GU KODI ENDU ADIKARIGALLI KALAKALIEND KELIKOLLUTTENE

Recent Posts

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

52 minutes ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

2 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

15 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

19 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago