ಕಡಿತಗೊಂಡ ಸೇವಾ ಸಿಂಧು ಆನ್ ಲೈನ್ ಸೇವೆಗಳು: ಸಂಕಷ್ಟದಲ್ಲಿ CSC ಸೇವಾ ಸಿಂಧು ಆಪರೇಟರ್ಸ್…!

ಸರ್ಕಾರ ಜಾರಿಗೆ ತರುವ ಯೋಜನಾ ಸವಲತ್ತುಗಳನ್ನು ಪಡೆಯಲು ಆನ್ ಲೈನ್ ಮುಖಾಂತರ ನೋಂದಣಿ ಮಾಡುವುದು ಕಡ್ಡಾಯವಾಗಿದೆ. ಆದ್ದರಿಂದ ಸಿ ಎಸ್ ಸಿ ಸೇವಾಸಿಂಧು, ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಸೇರಿದಂತೆ ವಿವಿಧ ಪೋರ್ಟ್ ಲ್ ಗಳನ್ನು ಅಸ್ತಿತ್ವಕ್ಕೆ ತರಲಾಗಿದೆ.

ಮೊದಲು ಎಲ್ಲಾ ಯೋಜನೆಗಳ ಸೌಲಭ್ಯ ಪಡೆಯಲು ಸೇವಾ ಸಿಂಧು ಪೋರ್ಟ್ ಲ್ ಮೂಲಕ ಅರ್ಜಿ ಹಾಕಲು ಅವಕಾಶ ಮಾಡಿಕೊಡಲಾಗಿತ್ತು. ಈಗ ದಿಢೀರನೆ ಸೇವಾ ಸಿಂಧು ಪೋರ್ಟ್ ಲನ್ನು ಪ್ರತ್ಯೇಕಿಸಿ ಕೇವಲ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಗೆ ನೀಡಿರುವುದು ಸೇವಾ ಸಿಂಧು ಮುಖೇನ ಅರ್ಜಿ ಸಲ್ಲಿಸುವ ಹಾಗು ಸಿ ಎಸ್ ಸಿ ಸೆಂಟರ್ ನಡೆಸುವ ಮಾಲೀಕರು ಸಂಕಷ್ಟದಲ್ಲಿದ್ದಾರೆ.

ಈ ಕುರಿತು ಬಿಎಸ್ ಎನ್ ಎಲ್ ಕಚೇರಿ ಸಮೀಪವಿರುವ ಸೈಬರ್ ಸೆಂಟರ್ ಮಾಲೀಕ‌ ಹಾಗೂ ಸಿಎಸ್ ಸಿ ಸೇವಾ ಸಿಂಧು ಆಪರೇಟರ್ ರವಿಚಂದ್ರ ಮಾತನಾಡಿ, ಕಳೆದ 10 ವರ್ಷಗಳಿಂದ ಕಾಮನ್ ಸರ್ವಿಸಸ್ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸುತ್ತಿದ್ದೇವೆ. ಆಧಾರ್ ತಿದ್ದುಪಡಿ, ಪಡಿತರ ತಿದ್ದುಪಡಿ, ವೋಟರ್ ಐಡಿ ತಿದ್ದುಪಡಿ, ಬ್ಯಾಂಕ್ ಅಕೌಂಟ್, ಉದ್ಯಮ್ ನೋಂದಣಿ, ಪವರ್ ಲೂಮ್ ಸಬ್ಸಿಡಿ, ವಿದ್ಯಾರ್ಥಿ ವೇತನ, ಜಿಎಸ್ ಟಿ ನೋಂದಣಿ, ಎಲ್ ಎಲ್ ಮತ್ತು ಡಿಎಲ್, ಹಿರಿಯ ನಾಗರಿಕರ ಗುರುತಿನ ಚೀಟಿ, ಪೊಲೀಸ್ ವೆರಿಫಿಕೇಶನ್ ಪ್ರಮಾಣ ಪತ್ರ, ಇ ಶ್ರಮ ಕಾರ್ಡ್, ವಿದ್ಯಾರ್ಥಿಗಳ ಬಸ್ ಪಾಸ್, ವಿದ್ಯಾರ್ಥಿ ವೇತನ ಹಾಗು ಹಾಗು ಹಲವು ಸರ್ಕಾರಿ ಸೌಲಭ್ಯಗಳ ಅರ್ಜಿಗಳನ್ನು ಸೇವಸಿಂಧು ಪೋರ್ಟಲ್ ನ ಮುಖಾಂತರ ಸಲ್ಲಿಸುತ್ತಿದ್ದೆವು ಆದರೆ ಇತ್ತೀಚಿನ ಕೆಲವು ಗ್ಯಾರೆಂಟಿ ಯೋಜನೆಗಳು ಒಂದೊಂದಾಗಿ ಪ್ರತ್ಯೇಕಿಸಿ ಆ ಯೋಜನೆಗಳ ಅರ್ಜಿಗಳನ್ನು ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಗೆ ನೀಡಿರುವುದು, ಸಿ ಎಸ್ ಸಿ ಸೆಂಟರ್ ಗಳನ್ನು ನಡೆಸಿ ಇಷ್ಟು ವರ್ಷಗಳಿಂದ ಜನ ಸೇವೆ ನೀಡಿ ಅದನ್ನೇ ಬದುಕಿಗೆ ಆಧಾರವಾಗಿ ನಂಬಿದ ನಮಗೆ ತುಂಬಾ ನಷ್ಟವಾಗುತ್ತಿದೆ ಎಂದರಲ್ಲದೇ ನಾವು ಸರ್ಕಾರದ ಮಾನದಂಡಗಳನ್ನು ಅನುಸರಿಸಿಯೇ ಅನ್ ಲೈನ್ ಸೇವೆಗಳನ್ನ ಸಾರ್ವಜನಿಕರಿಗೆ ನೀಡುತ್ತಿದ್ದೇವೆ ಆದರೂ ಸೇವಾ ಸಿಂಧುವಿನ ಕೆಲವು ಸೇವೆಗಳನ್ನು ಕಡಿತಗೊಳಿಸಿರುವುದರಿಂದ ನಮಗೆ ಅನ್ಯಾಯವಾಗಿದೆ ಎಂದು ತಮ್ಮ ಅಳಲನ್ನ ತೋಡಿಕೊಂಡರು.

ನಾವು ಸೈಬರ್ ನಡೆಸಿ ಜೀವನ ಮಾಡಬೇಕು, ಸೇವಾ ಸಿಂಧು ಪೋರ್ಟ್ ಲ್ ಪ್ರತ್ಯೇಕಿಸಿರುವುದರಿಂದ ಅಂಗಡಿ ಬಾಡಿಗೆ, ವಿದ್ಯುತ್ ಬಿಲ್, ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇದ್ದೇವೆ. ದಯಮಾಡಿ ಕರ್ನಾಟಕ, ಬೆಂಗಳೂರು, ಗ್ರಾಮ ಒನ್ ಗೆ ನೀಡಿರುವ ಆನ್ ಲೈನ್ ಸೇವೆಗಳನ್ನ ಸೇವಾ ಸಿಂಧು ಪೋರ್ಟ್ ಲ್ ಗೂ ನೀಡಿ ಎಂದು ಒತ್ತಾಯಿಸಿದರು.

Ramesh Babu

Journalist

View Comments

  • SIR I AM CSC CENTAR MAN NAU 4 VARSHAGALIND CSC NADESUTIDDENE SEVA SHINDU PORTALLINALLI BAHALA APPLEACATION TEGEDU HAKI NAMMA HOTTEMELE BARE HAKIDANTAGIDE ADDARIND ADHIKARIGALALLI KELIKOLLUVUDENENDARE GRAMA ONE, KARNATAKA ONE GE NIDID SAVALATTIU GALANNU CSC GU KODI ENDU ADIKARIGALLI KALAKALIEND KELIKOLLUTTENE

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

3 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

7 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

16 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

23 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

24 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago