Categories: ಮೈಸೂರು

eKYC ಮಾಡಿಸದ ಫಲಾನುಭವಿಗಳ ಪಡಿತರವನ್ನು ತಾತ್ಕಾಲಿಕವಾಗಿ ಸ್ಥಗಿತಕ್ಕೆ ಸೂಚನೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ರಾಜ್ಯದಲ್ಲಿ eKYC ಪ್ರಕ್ರಿಯೆ ಪೂರ್ಣಗೊಳಿಸದ ಪಡಿತರ ಚೀಟಿದಾರರ ಸಂಖ್ಯೆ ಇನ್ನೂ ಗಮನಾರ್ಹವಾಗಿದೆ. ಈ ವಿಚಾರದಲ್ಲಿ ಗಂಭೀರ ಚಿಂತೆ ವ್ಯಕ್ತಪಡಿಸಿ, ಈ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಸಂಬಂಧಿತ ಅಧಿಕಾರಿಗಳಿಗೆ ಕಟ್ಟುನಿಟ್ಟಾದ ಸೂಚನೆ ನೀಡಿಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಆಹಾರ, ನಾಗರಿಕ ಸರಬರಾಜು ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಮೈಸೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದೆ ಮಾತನಾಡಿದ ಅವರು, ಒಂದು ತಿಂಗಳ ಗಡಿಯನ್ನು ನಿಗದಿ ಮಾಡಿದ್ದು, ಈ ಅವಧಿಯಲ್ಲಿ eKYC ಮುಗಿಸದ ಫಲಾನುಭವಿಗಳ ಪಡಿತರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸೂಚಿಸಲಾಗಿದೆ ಎಂದರು.

ಯಾವುದೇ ಅನಗತ್ಯ ಪಡಿತರ ಕಾರ್ಡ್ ವಿತರಣೆಯಾದರೆ, ತಕ್ಷಣವೇ ತನಿಖೆ ನಡೆಸಿ ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾವಾರಿಯಾಗಿ ಜಾಗೃತಿ ಸಮಿತಿಗಳನ್ನು ರಚಿಸಿ, ಸಾರ್ವಜನಿಕರಲ್ಲಿ ತಿಳಿವು ಮೂಡಿಸುವ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಹೇಳಿದರು‌.

ಇದೇ ಸಭೆಯಲ್ಲಿ ಆಹಾರಧಾನ್ಯಗಳ ಸುರಕ್ಷಿತ ಸಂಗ್ರಹಣೆ, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸಿದ ಧಾನ್ಯಗಳ ನಿರ್ವಹಣೆ, ಗುಡ್ಡ ಪ್ರದೇಶದ ಮನೆಗಳಿಗೆ ಪಡಿತರ ತಲುಪುವ ವ್ಯವಸ್ಥೆ, ಕಾನೂನು ಮಾಪನ ಇಲಾಖೆಗೆ ಬೇಕಾದ ವಾಹನ-ಸಿಬ್ಬಂದಿ ಸೇರಿದಂತೆ ಹಲವಾರು ವಿಷಯಗಳ ಕುರಿತು ಸೂಕ್ತ ಸೂಚನೆಗಳು ನೀಡಲಾಯಿತು ಎಂದು ತಿಳಿಸಿದರು.

ಪಡಿತರ ವ್ಯವಸ್ಥೆಯಲ್ಲಿನ ಪಾರದರ್ಶಕತೆ, ಪ್ರಾಮಾಣಿಕತೆ ಮತ್ತು ಸಾರ್ವಜನಿಕ ಹಿತವನ್ನು ಕೇಂದ್ರಬಿಂದುಗೊಳಿಸಿಕೊಂಡು ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಈ ಸಭೆಯಲ್ಲಿ ಇಲಾಖೆ ಕಾರ್ಯದರ್ಶಿ ಶ್ರೀ ಮನೋಜ್ ಜೈನ್, ಆಯುಕ್ತ ಶ್ರೀಮತಿ ವಿಜಯ ಜ್ಯೋತ್ಸ್ನಾ, ಆಪ್ತ ಕಾರ್ಯದರ್ಶಿ ಡಾ. ಎಚ್. ನಟರಾಜ್, ನಿಗಮ ನಿರ್ದೇಶಕ ಶ್ರೀ ಜಗದೀಶ್ ಹಾಗೂ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

7 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

7 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

7 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

8 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

11 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

14 hours ago